ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಖೇಹರ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ
ಬೆಳಗ್ಗೆ 10 ಗಂಟೆಗೆ ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಪುಟದ ಸಚಿವರು, ಮುಖ್ಯ ಕಾರ್ಯದರ್ಶಿ ರಂಗನಾಥ್ ಮತ್ತಿತರು ಉಪಸ್ಥಿತರಿದ್ದರು. ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ನೇಮಕವಾಗಿರುವುದು ಸಂತೋಷವಾಗಿದೆ. ಕರ್ನಾಟಕ ಸುಂದರ ರಾಜ್ಯ, ಈ ರಾಜ್ಯದಲ್ಲಿ ಸೇವೆ ಸಲ್ಲಿಸುವುದು ಸಂಭ್ರಮದ ವಿಚಾರ ಎಂದು ಖೇಹರ್ ಹೇಳಿದರು.
ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಪಿ ಡಿ ದಿನಕರನ್ ಅವರು ಸಿಕ್ಕಿಂಗೆ ವರ್ಗಾವಣೆಗೊಂಡ ನಂತರ ಉತ್ತರಖಂಡ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ಅವರನ್ನು ಕರ್ನಾಟಕಕ್ಕೆ ವರ್ಗಾಯಿಸಲಾಗಿತ್ತು. ಶನಿವಾರ ಬೆಂಗಳೂರಿಗೆ ಆಗಮಿಸಿದ್ದ ನ್ಯಾ. ಸಿಂಗ್ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಅವರೊಂದಿಗೆ ಸೌಹಾರ್ದ ಮಾತುಕತೆ ನಡೆಸಿದ್ದರು.
Comments
ಕರ್ನಾಟಕ ಹೈಕೋರ್ಟ್ ರಾಜಭವನ ಎಚ್ಆರ್ ಭಾರದ್ವಾಜ್ ಪ್ರಮಾಣ ವಚನ karnataka high court chief justice rajbhavan hr bhardwaj oath taking ಜೆಎಸ್ ಖೇಹರ್
Story first published: Monday, August 9, 2010, 14:57 [IST]