ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಳ್ಳಾರಿಗೆ ಲಗ್ಗೆ ಇಟ್ಟ ಲಕ್ಷಾಂತರ ಕೈ ಸೈನ್ಯ

By Mrutyunjaya Kalmat
|
Google Oneindia Kannada News

Siddaramaiah
ಬಳ್ಳಾರಿ, ಆ. 9 : ಕೆಪಿಸಿಸಿಯ ನೇತೃತ್ವದಲ್ಲಿ ನಡೆಯುತ್ತಿರುವ ಬೆಂಗಳೂರಿನಿಂದ ಬಳ್ಳಾರಿವರೆಗಿನ ಪಾದಯಾತ್ರೆ ಕೊನೆಗೂ ಕ್ಲೈಮಾಕ್ಸ್ ಹಂತ ಬಂದು ತಲುಪಿದೆ. ಲಕ್ಷಾಂತರ ಕಾರ್ಯಕರ್ತರೊಂದಿಗೆ ಕೈ ಸೈನ್ಯ ಗಣಿ ನಾಡು ಬಳ್ಳಾರಿಗೆ ಬಂದು ನಿಂತಿದೆ. ಮಧ್ಯಾಹ್ನ ಎರಡು ಹೊತ್ತಿಗೆ ಕಾಂಗ್ರೆಸ್ ಐತಿಹಾಸಿಕ ಸಮಾವೇಶ ಆರಂಭವಾಗಲಿದೆ. ಎಲ್ಲಿ ನೋಡಿದರೂ ಕಾಂಗ್ರೆಸ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಪ್ಲೆಕ್ಸ್, ಬಂಟಿಂಗ್, ಬ್ಯಾನರ್ ಕಾಣುತ್ತಿವೆ. ಕಾರ್ಯಕರ್ತರ ಜಯಘೋಷ ಮುಗಿಲು ಮುಟ್ಟಿದೆ.

ಸುಮಾರು 300 ಮಂದಿಗೆ ಕುಳಿತುಕೊಳ್ಳುವ ವೇದಿಕೆಯನ್ನು ನಿರ್ಮಿಸಲಾಗಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಹಾಗೂ ಕೇಂದ್ರ ಆರೋಗ್ಯ ಸಚಿವ ಗುಲಾಮ್ ನಬಿ ಅಜಾದ್, ಕಾರ್ಮಿಕ ಮಂತ್ರಿ ಮಲ್ಲಿಕಾರ್ಜುನ ಖರ್ಗೆ, ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ, ರೈಲ್ವೆ ಇಲಾಖೆ ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ, ಕಾನೂನು ಸಚಿವ ವೀರಪ್ಪ ಮೊಯ್ಲಿ, ಆಸ್ಕರ್ ಫರ್ನಾಂಡಿಸ್, ಬಿ ಕೆ ಹರಿಪ್ರಸಾದ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ 21 ಪ್ರಮುಖ ನಾಯಕರು ಮಾತನಾಡಲಿದ್ದಾರೆ. ಸಂಜೆವರೆಗೂ ಕಾರ್ಯಕ್ರಮ ನಡೆಯಲಿದೆ.

ಪಾದಯಾತ್ರೆಯ ನೇತಾರರಾದ ಸಿದ್ಧರಾಮಯ್ಯ, ಆರ್ ವಿ ದೇಶಪಾಂಡೆ, ಡಿ ಕೆ ಶಿವಕುಮಾರ್ ಅವರಿಗೆ ಬಳ್ಳಾರಿ ಭರ್ಜರಿ ಸ್ವಾಗತ ಕೋರಲಾಯಿತು. ಹೆಣ್ಣುಮಕ್ಕಳು ಇವರನ್ನು ಆರತಿ ಎತ್ತುವ ಮೂಲಕ ಬಳ್ಳಾರಿ ನಗರಕ್ಕೆ ಬರಮಾಡಿಕೊಂಡರು. ಎಲ್ಲಿ ನೋಡಿದರೂ ಕಾಂಗ್ರೆಸ್ ಭಾವುಟಗಳು ಕಂಡು ಬರುತ್ತಿವೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬಳ್ಳಾರಿಯನ್ನು ಮತ್ತೆ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ನಾಯಕರು ಇಂದು ಮ್ಯಾಜಿಕ್ ಮಾಡುವ ಸಾಧ್ಯತೆ ಇದೆ.

ಬಳ್ಳಾರಿಯಾದ್ಯಂತ ವ್ಯಾಪಕ ಭದ್ರತೆಯನ್ನು ಏರ್ಪಡಿಸಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಒಂದು ರೀತಿಯಲ್ಲಿ ಬಳ್ಳಾರಿಯಲ್ಲಿ ಅಘೋಷಿತ ಬಂದ್ ಆಚರಿಸಲಾಗುತ್ತಿದೆ. ಜನಾರ್ದನರೆಡ್ಡಿ, ಶ್ರೀರಾಮುಲು ಅವರ ಮನೆಗೆ ಭಾರಿ ಬಿಗಿ ಭದ್ರತೆ ಒದಗಿಸಲಾಗಿದೆ. ಈ ಇಬ್ಬರು ನಾಯಕರು ಬಳ್ಳಾರಿಯಲ್ಲಿ ಉಳಿದುಕೊಂಡಿದ್ದಾರೆ. ಸಮಾವೇಶದ ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ.

ನಿಮ್ಮ ಮೊಬೈಲಿನಲ್ಲಿ ದಟ್ಸ್ ಕನ್ನಡ ಪ್ರತ್ಯಕ್ಷ!

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X