ಹಾಲಪ್ಪ ರೇಪ್ ಕೇಸಿನಲ್ಲಿ 'ಬಂ' ಕೈವಾಡ?

ರಾಜ್ಯಾದ್ಯಂತ ತೀವ್ರ ಒತ್ತಡ ಬಂದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಹಾಲಪ್ಪ ಅತ್ಯಾಚಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದರು. ವಿಚಾರಣೆ ನಡೆಸುತ್ತಿರುವ ಸಿಐಡಿ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಮಾಜಿ ಆಪ್ತ ಕಾರ್ಯದರ್ಶಿ ಹುಲ್ತಿಕೊಪ್ಪ ಶ್ರೀಧರ್ ಎಂಬುವವರು ಅತ್ಯಾಚಾರಕ್ಕೆ ಒಳಗಾದ ಚಂದ್ರಾವತಿ ಮತ್ತು ಅವರ ಪತಿ ವೆಂಕಟೇಶಮೂರ್ತಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿರುವುದು ಗೊತ್ತಾಗಿದೆ. ಹೀಗಾಗಿ ಶ್ರೀಧರ್ ಅವರನ್ನು ಸಿಐಡಿ ಪೊಲೀಸರು ವಿಚಾರಣೆ ನಡೆಸಿದ್ದರಿಂದ ಪ್ರಕರಣ ಮತ್ತೊಂದು ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.
ವೆಂಕಟೇಶಮೂರ್ತಿ ಮತ್ತು ಚಂದ್ರಾವತಿ ದಂಪತಿಗಳ ಮನೆಗೆ ಭೋಜನಕ್ಕಾಗಿ ಬಂದಿದ್ದ ಮಾಜಿ ಸಚಿವ ಹರತಾಳು ಹಾಲಪ್ಪ, ನಡುರಾತ್ರಿಯಲ್ಲಿ ವೆಂಕಟೇಶಮೂರ್ತಿ ಅವರನ್ನು ಮಾತ್ರೆ ತರಲು ಗೆಸ್ಟ್ ಹೌಸ್ ಗೆ ಕಳಿಸಿ ಅವರ ಪತ್ನಿ ಚಂದ್ರಾವತಿ ಮೇಲೆ ಅತ್ಯಾಚಾರ ನಡೆಸಿದ್ದರು ಎನ್ನುವುದು ಹಾಲಪ್ಪ ಅವರ ಮೇಲಿರುವ ಗಂಭೀರ ಆರೋಪ. ಇದೇ ಕಾರಣ ಅವರು ತಮ್ಮ ಮಂತ್ರಿ ಪದವಿಯನ್ನು ಕಳೆದುಕೊಂಡಿದ್ದು ಗೊತ್ತಿರುವ ಸಂಗತಿಯಾಗಿದೆ.
ನಾನು ನಿರಪರಾಧಿ. ಈ ಪ್ರಕರಣದಲ್ಲಿ ನನ್ನನ್ನು ಬಲಿಪಶು ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿಯೊಬ್ಬರ ಕೈಚಳಕದಿಂದ ನಾನು ಅತ್ಯಾಚಾರ ಪ್ರಕಕಣದಲ್ಲಿ ಸಿಲುಕಿಕೊಂಡಿದ್ದೇನೆ ಎಂದು ಹಾಲಪ್ಪ ನೇರವಾಗಿ ಮಾಜಿ ಸಿಎಂ ಬಂಗಾರಪ್ಪ ಅವರಡೆಗೆ ಬೊಟ್ಟು ಮಾಡಿ ತೋರಿಸಿದ್ದರು. ಹಾಲಪ್ಪ ಹೇಳಿಕೆಗೆ ತೀವ್ರ ಕೆರಳಿದ್ದ ಬಂಗಾರಪ್ಪ ನನ್ನ ತಂಟೆಗೆ ಬಂದರೆ ಧೂಳಿಪಟ ಮಾಡುವೆ ಎಂದು ಗುಟುರು ಹಾಕಿದ್ದರು.
ಈ ಇಬ್ಬರ ಮಧ್ಯೆ ಆಗಾಗ್ಗೆ ಮಾತಿನ ಸಮರಗಳು ನಡೆದೆ ಇದ್ದವು. ಹಾಲಪ್ಪ ಅವರನ್ನು ಬೆಳೆಸಿದ್ದು ಇದೇ ಬಂಗಾರಪ್ಪ ಎನ್ನುವುದು ವಿಶೇಷ ಸಂಗತಿ. ನಂತರ ಬದಲಾದ ರಾಜಕೀಯದಲ್ಲಿ ಹಾಲಪ್ಪ ಯಡಿಯೂರಪ್ಪ ಕ್ಯಾಂಪ್ ಗೆ ಸೇರಿಕೊಂಡಿದ್ದು ಬಂಗಾರಪ್ಪ ಅವರ ಪಿತ್ತ ನೆತ್ತಿಗೇರುವಂತೆ ಮಾಡಿತು. ಸೊರಬ ಕ್ಷೇತ್ರದಲ್ಲಿ ಬಂಗಾರಪ್ಪ ಅವರ ಮಗ ಮಧು ಬಂಗಾರಪ್ಪ ಅವರನ್ನು ಸೋಲಿಸಿ ಯಡಿಯೂರಪ್ಪ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದುದು, ಬಂಗಾರಪ್ಪ ಅವರ ಕಣ್ಣುಕುಕ್ಕುವಂತೆ ಮಾಡಿದ್ದು ಸತ್ಯ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications