ಪತ್ನಿ ಕೊಲೆ ಹಿಂದೆ ಇನ್ಫಿ ಟೆಕ್ಕಿ ಕೈಚಳಕ?

ಪತ್ನಿ ಪ್ರಿಯಾ ಗುಪ್ತಾ ಅವರ ಹತ್ಯೆ ಹಿಂದೆ ಪತಿ ಸತೀಶ್ ಗುಪ್ತಾ ಅವರ ಕೈವಾಡವಿದೆ. ಪ್ರಿಯಾ ಅವರ ಕೊಲೆ ಮಾಡಿದವರು ವೃತ್ತಪರ ಕೊಲೆಗಾರರಲ್ಲ. ಇದೊಂದು ಪೂರ್ವ ನಿಯೋಜಿತ ಕೃತ್ಯ. ಅಲ್ಲದೇ, ಕೊಲೆ ಮಾಡಿದ ನಂತರ ಕೊಲೆಗಾರರು ಬೂಟು ಮತ್ತು ಜರ್ಕಿನ್ ಗಳನ್ನು ಬಿಟ್ಟು ಹೋಗಿರುವುದು ಅನುಮಾನ ಬಲಗೊಳ್ಳಲು ಕಾರಣವಾಗಿದೆ. ಮಂಗಳವಾರ ಬೆಳಗಿನ ಜಾವ ಸತೀಶ್ ಸುಮಾರು 5.30ಕ್ಕೆ ವಾಕಿಂಗ್ ಗೆ ಹೊರಡುತ್ತಾರೆ. ಆದರೆ, ಅವರ ಮನೆಯಲ್ಲಿ ವಾಕಿಂಗ್ ಗೆ ಮೀಸಲಾದ ಮೂರ್ನಾಲ್ಕು ಜೊತೆ ಬೂಟುಗಳಿವೆ. ಅದನ್ನು ಧರಿಸಿದ ಅವರು, ತರಾತುರಿಯಲ್ಲಿ ಚಪ್ಪಲ್ಲುಗಳನ್ನು ಹಾಕಿಕೊಂಡು ವಾಕಿಂಗ್ ಹೋಗಿದ್ದಾರೆ.
ಪೇಪರ್ ಹಾಕುವ ಸೋಗಿನಲ್ಲಿ ಇಬ್ಬರು ವ್ಯಕ್ತಿಗಳು ಮನೆಗೆ ಬಂದಿದ್ದಾರೆ ಎಂದು ಪತ್ನಿ ಪ್ರಿಯಾ ಅವರಿಂದ ದೂರವಾಣಿ ಕರೆ ಸ್ವೀಕರಿಸಿದ ಸತೀಶ್, ನಾನು ಬರುವವರೆಗೂ ಬಾಗಿಲು ತೆರೆಯಬೇಡ ಎಂದು ಹೇಳಿದ್ದಾನೆ. ಸುಮಾರು 6.30ರ ಹೊತ್ತಿಗೆ ಮನೆಗೆ ಬಂದ ಸತೀಶ್, ಬಾಗಿಲು ಬಡಿದಿದ್ದಾನೆ. ಪತ್ನಿಗೆ ದೂರವಾಣಿ ಕರೆಯನ್ನು ಮಾಡಿದ್ದಾನೆ.
ಆದರೆ, ಪ್ರಿಯಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ತಕ್ಷಣ ವೆಂಕಟೇಶ್ ಲೇಔಟ್ ನಲ್ಲಿರುವ ತನ್ನ ಪೋಷಕರ ಮನೆಗೆ ತೆರಳಿದ ಸತೀಶ್, ಅವರ ಕಾರು ತೆಗೆದುಕೊಂಡು ಆಫೀಸ್ ಗೆ ತೆರಳಿ ಅಲ್ಲಿದ್ದ ಮನೆಯ ಡೂಪ್ಲಿಕೇಟ್ ಕೀ ತೆಗೆದುಕೊಂಡು ಬಂದು ಮನೆಯ ಬಾಗಿಲು ತೆಗೆದಿದ್ದಾನೆ. ಹೀಗಾಗಿ ಕೊಲೆಯನ್ನು ಈ ಕುಟುಂಬವನ್ನು ಚೆನ್ನಾಗಿ ಬಲ್ಲವರೇ ಮಾಡಿದ್ದಾರೆಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹುಳಿಮಾವು ಪೊಲೀಸರು ತಿಳಿಸಿದ್ದಾರೆ.
ಪೇಪರ್ ಹಾಕುವ ನೆಪದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಪ್ರಿಯಾ ಗುಪ್ತಾ ಅವರನ್ನು ಹತ್ಯೆಗೈದು 2 ಲಕ್ಷ ರುಪಾಯಿ ಮತ್ತು ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿತ್ತು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications