ಮಾಲೂರು, ಬಂಗಾರಪೇಟೆ ನೀರಿನ ಕದನ

ಈ ಯೋಜನೆಯನ್ನು ಕುಡಿಯುವ ನೀರಿಗೆ ಮಾತ್ರ ಸೀಮಿತಗೊಳಿಸುವಂತೆ ಹಾಗೂ ಯೋಜನೆಯನ್ನು ಕೊಂಚಮಟ್ಟಿಗೆ ಪರಿಷ್ಕರಿಸುವಂತೆ ನಿರ್ದೇಶಿಸಿ ಏಕ ಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿತು.
ಹಿನ್ನೆಲೆ: ಕೋಲಾರ ಜಿಲ್ಲೆಯ ಬೂದಿಕೋಟೆ ಬಳಿ ನಿರ್ಮಿಸಲಾಗಿರುವ ಮಾರ್ಕಂಡೇಯ ಜಲಾಶಯದಿಂದ ಮಾಲೂರಿಗೆ ಕುಡಿಯುವ ನೀರು ಪೂರೈಸಲು 20 ಕೋಟಿ ರೂಗಳ ಯೋಜನೆಯೊಂದನ್ನು ಸರ್ಕಾರ ರೂಪಿಸಿದೆ.
ಈ ಯೋಜನೆ ಜಾರಿಗೊಳಿಸುವ ಮೂಲಕ ಮಾಲೂರು ಹಾಗು ಸುತ್ತಮುತ್ತಲ ಗ್ರಾಮಗಳ ಜನರ ಕುಡಿಯುವ ನೀರಿನ ಬವಣೆ ನೀಗಿಸುವುದು ಈ ಯೋಜನೆಯ ಉದ್ದೇಶ. ಆದರೆ ಈ ಯೋಜನೆ ಜಾರಿಗೆ ಬಂಗಾರಪೇಟೆಯ ನಾಗರಿಕರು ತೀವ್ರ ವಿರೋಧವ್ಯಕ್ತ ಪಡಿಸುತ್ತಿದ್ದು ಯೋಜನೆ ಜಾರಿಗೆ ಬಂದರೆ ಬಂಗಾರಪೇಟೆಗೆ ಕುಡಿಯುವ ನೀರು ಪೂರೈಕೆಗೆ ತೊಂದರೆ ಎದುರಾಗಲಿದೆ ಎಂಬುದು ಅಲ್ಲಿನ ನಾಗರಿಕರ ವಾದ.
ಈ ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೊಳಿಸಲು ಹೊರಟಿರುವ ಯೋಜನೆಯನ್ನು ವಿರೋಧಿಸಿ ಬಂಗಾರಪೇಟೆಯ ನಾಗರಿಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ಏಕ ಸದಸ್ಯ ನ್ಯಾಯಪೀಠ ಯೋಜನೆಗೆ ತಡೆ ಆಜ್ಞೆ ನೀಡಿತ್ತು.
ಈ ತಡೆ ಆಜ್ಞೆಯನ್ನು ತೆರವುಗೊಳಿಸುವಂತೆ ಕೋರಿ ಮಾಲೂರು ನಾಗರಿಕರು ಮೇಲ್ಮನವಿ ಸಲ್ಲಿಸಿದ್ದರು. ಮಂಗಳವಾರ ಈ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಈ ಮೊದಲು ಏಕ ಸದಸ್ಯ ನ್ಯಾಯ ಪೀಠ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ತೀರ್ಪು ನೀಡಿತು.
ಇದರಿಂದಾಗಿ ಯೋಜನೆ ಜಾರಿಗೆ ಇದ್ದ ಅಡೆತಡೆಗಳು ನಿವಾರಣೆ ಆದಂತಾಗಿದೆ. ಬರದ ಬೇಗೆಯಿಂದ ತತ್ತರಿಸುತ್ತಿರುವ ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಜನತೆ ಕುಡಿಯುವ ನೀರಿನ ಸಮರ್ಪಕ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ. ಈ ಯೋಜನೆ ಜಾರಿಗೊಂಡಲ್ಲಿ ಮಾಲೂರು ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications