ಮಾಲೂರು, ಬಂಗಾರಪೇಟೆ ನೀರಿನ ಕದನ

ಈ ಯೋಜನೆಯನ್ನು ಕುಡಿಯುವ ನೀರಿಗೆ ಮಾತ್ರ ಸೀಮಿತಗೊಳಿಸುವಂತೆ ಹಾಗೂ ಯೋಜನೆಯನ್ನು ಕೊಂಚಮಟ್ಟಿಗೆ ಪರಿಷ್ಕರಿಸುವಂತೆ ನಿರ್ದೇಶಿಸಿ ಏಕ ಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿತು.
ಹಿನ್ನೆಲೆ: ಕೋಲಾರ ಜಿಲ್ಲೆಯ ಬೂದಿಕೋಟೆ ಬಳಿ ನಿರ್ಮಿಸಲಾಗಿರುವ ಮಾರ್ಕಂಡೇಯ ಜಲಾಶಯದಿಂದ ಮಾಲೂರಿಗೆ ಕುಡಿಯುವ ನೀರು ಪೂರೈಸಲು 20 ಕೋಟಿ ರೂಗಳ ಯೋಜನೆಯೊಂದನ್ನು ಸರ್ಕಾರ ರೂಪಿಸಿದೆ.
ಈ ಯೋಜನೆ ಜಾರಿಗೊಳಿಸುವ ಮೂಲಕ ಮಾಲೂರು ಹಾಗು ಸುತ್ತಮುತ್ತಲ ಗ್ರಾಮಗಳ ಜನರ ಕುಡಿಯುವ ನೀರಿನ ಬವಣೆ ನೀಗಿಸುವುದು ಈ ಯೋಜನೆಯ ಉದ್ದೇಶ. ಆದರೆ ಈ ಯೋಜನೆ ಜಾರಿಗೆ ಬಂಗಾರಪೇಟೆಯ ನಾಗರಿಕರು ತೀವ್ರ ವಿರೋಧವ್ಯಕ್ತ ಪಡಿಸುತ್ತಿದ್ದು ಯೋಜನೆ ಜಾರಿಗೆ ಬಂದರೆ ಬಂಗಾರಪೇಟೆಗೆ ಕುಡಿಯುವ ನೀರು ಪೂರೈಕೆಗೆ ತೊಂದರೆ ಎದುರಾಗಲಿದೆ ಎಂಬುದು ಅಲ್ಲಿನ ನಾಗರಿಕರ ವಾದ.
ಈ ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೊಳಿಸಲು ಹೊರಟಿರುವ ಯೋಜನೆಯನ್ನು ವಿರೋಧಿಸಿ ಬಂಗಾರಪೇಟೆಯ ನಾಗರಿಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ಏಕ ಸದಸ್ಯ ನ್ಯಾಯಪೀಠ ಯೋಜನೆಗೆ ತಡೆ ಆಜ್ಞೆ ನೀಡಿತ್ತು.
ಈ ತಡೆ ಆಜ್ಞೆಯನ್ನು ತೆರವುಗೊಳಿಸುವಂತೆ ಕೋರಿ ಮಾಲೂರು ನಾಗರಿಕರು ಮೇಲ್ಮನವಿ ಸಲ್ಲಿಸಿದ್ದರು. ಮಂಗಳವಾರ ಈ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಈ ಮೊದಲು ಏಕ ಸದಸ್ಯ ನ್ಯಾಯ ಪೀಠ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ತೀರ್ಪು ನೀಡಿತು.
ಇದರಿಂದಾಗಿ ಯೋಜನೆ ಜಾರಿಗೆ ಇದ್ದ ಅಡೆತಡೆಗಳು ನಿವಾರಣೆ ಆದಂತಾಗಿದೆ. ಬರದ ಬೇಗೆಯಿಂದ ತತ್ತರಿಸುತ್ತಿರುವ ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಜನತೆ ಕುಡಿಯುವ ನೀರಿನ ಸಮರ್ಪಕ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ. ಈ ಯೋಜನೆ ಜಾರಿಗೊಂಡಲ್ಲಿ ಮಾಲೂರು ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications