ಸಾವು ಬಯಸಿ ನ್ಯಾಯ ಬೇಡುತ್ತಿರುವ ಅಜ್ಜಿ

ದಾವಣಗೆರೆ ಮೂಲದ ನಿವೃತ್ತ ಶಿಕ್ಷಕಿಯಾಗಿರುವ ಕರಿಬಸಮ್ಮ ದಯಾಮರಣಕ್ಕೆ ನಿಷಿದ್ದ ಹೇರಿರುವ ಭಾರತೀಯ ದಂಡ ಸಂಹಿತೆ 306 ಮತ್ತು 307 ಕಲಂನಿಂದ ತನಗೆ ವಿನಾಯಿತಿ ನೀಡಬೇಕೆಂದು ನ್ಯಾಯಮೂರ್ತಿ ಅಜಿತ್ ಗುಂಜಾಳ್ ಮುಂದೆ ಅರ್ಜಿ ಸಲ್ಲಿಸಿದ್ದಾರೆ. ದಾವಣಗೆರೆ ಆನಂದ ವೃದ್ದಾಶ್ರಮದಲ್ಲಿ ಬದುಕು ನೂಕುತ್ತಿರುವ ಕರಿಬಸಮ್ಮ ಮೂಳೆಗೆ ಸಂಬಂಧಿಸಿದ ತೀವ್ರ ಸ್ವರೂಪದ ಕಾಯಿಲೆಯಿಂದ ಕಳೆದ 10 ವರ್ಷಗಳಿಂದ ಬಳಲುತ್ತಿದ್ದಾರೆ. ಅವರಿಗೆ 70 ವರ್ಷ.
2003ರಲ್ಲಿ ದಯಾಮರಣಕ್ಕೆ ಅನುಮತಿ ನೀಡುವಂತೆ ರಾಜ್ಯ ಸರಕಾರಕ್ಕೆ ಅರ್ಜಿ ಸಲ್ಲಿಸಿದ್ದ ಕರಿಬಸಮ್ಮ ಪ್ರಧಾನಿ ಕಚೇರಿಗೆ ಪತ್ರ ಕೂಡ ಬರೆದಿದ್ದರು. ತನ್ನ ದೇಹವನ್ನು ದಾವಣಗೆರೆ ವೈದ್ಯಕೀಯ ಕಾಲೇಜಿಗೆ ದಾನ ಮಾಡುವ ಇಚ್ಛೆ ಹೊಂದಿದ್ದಾರೆ. ಅಮೆರಿಕಾ ಮತ್ತು ಯುರೋಪ್ ರಾಷ್ಟ್ರಗಳಲ್ಲಿ ದಯಾಮರಣಕ್ಕೆ ಅನುಮತಿ ಇರುವಂತೆ ತನಗೂ ವಿಶೇಷ ಕಾಯಿದೆಯ ಅಡಿ ಅನುಮತಿ ನೀಡಬೇಕೆಂದು ಕರಿಬಸಮ್ಮ ನ್ಯಾಯಾಲಯಕ್ಕೆ ಪ್ರಾರ್ಥನೆ ಸಲ್ಲಿಸಿದ್ದಾರೆ.
1973ರಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಜೀವಂತ ಶವವಾಗಿರುವ ಮುಂಬೈ ಮೂಲದ ನರ್ಸ್ ಅರುಣ್ ಶಾನುಭಾಗ್ ಅವರಿಗೆ ದಯಾಮರಣ ನೀಡುವಂತೆ 2009ರಲ್ಲಿ ಪತ್ರಕರ್ತೆ ಪಿಂಕಿ ವಿರಾಣಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ರಾಜ್ಯ ಹೈಕೋರ್ಟ್ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಇಂಥದ್ದೊಂದು ಅರ್ಜಿ ಸಲ್ಲಿಸಲಾಗಿದೆ. ನ್ಯಾಯಾಲಯದ ಅಭಿಪ್ರಾಯ ಏನು ಎಂಬ ಕುತೂಹಲ ರಾಜ್ಯದ ಜನತೆಯ ಮನಸ್ಸಿನಲ್ಲಿ ಕುಳಿತಿದೆ.
ಓದಲು ಮರೆಯದಿರಿ : ನೀಳ್ಗಥೆ 'ದಯಾಮರಣ'
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications