ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್ಡಿಕೆ ವಿರುದ್ಧ ಲಂಚ ಆರೋಪ : ರೆಡ್ಡಿಗೆ ಹಿನ್ನಡೆ

By Mrutyunjaya Kalmat
|
Google Oneindia Kannada News

HD Kumaraswamy
ಬೆಂಗಳೂರು, ಆ. 11 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ದದ 150 ಕೋಟಿ ರುಪಾಯಿಗಳ ಲಂಚ ಪ್ರಕರಣ ಹಾಗೂ ಬಳ್ಳಾರಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರುಗಳ ಸಂಬಂಧ ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿಗೆ ತೀವ್ರ ಹಿನ್ನಡೆಯಾಗಿದೆ.

ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ವಿರುದ್ಧ 150 ಕೋಟಿ ರುಪಾಯಿ ಲಂಚ ಆರೋಪ ಮಾಡಿದ್ದ ಜನಾರ್ದನರೆಡ್ಡಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸುಪ್ರಿಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಮಂಗಳವಾರ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠ ಅಕ್ರಮ ಆಸ್ತಿ ಸಂಪಾದನೆ ವಿಚಾರಣೆ ಕುರಿತು ಸುಪ್ರಿಂಕೋರ್ಟ್ ಗೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಯಾವ ಕೋರ್ಟ್ ನಲ್ಲಾದರೂ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ ರೆಡ್ಡಿ ತಮ್ಮ ಅರ್ಜಿಯನ್ನು ವಾಪಸ್ ಪಡೆಯುವುದರೊಂದಿಗೆ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ.

ನಿಮ್ಮ ಮೊಬೈಲಿನಲ್ಲಿ ದಟ್ಸ್ ಕನ್ನಡ ಪ್ರತ್ಯಕ್ಷ!

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X