ಭಾರತದ ವೋಟಿಂಗ್ ಯಂತ್ರ ಸರಿಯಿಲ್ಲ : ಐಟಿ ತಜ್ಞರು

ಇದರೊಂದಿಗೆ ಈ ಕುರಿತು ಸಂಶಯ ವ್ಯಕ್ತಪಡಿಸಿದ್ದ ಬಿಜೆಪಿಯ ಆತಂಕ ನಿಜವಾದಂತಾಗಿದೆ. ಭಾರತೀಯ ಚುನಾವಣಾ ಆಯೋಗ ಜಾರಿಗೆ ತಂದಿರುವ ಈ ಮತದಾನ ಯಂತ್ರಗಳು ಸುರಕ್ಷಿತವಲ್ಲ. ಅಕ್ರಮ ನಿರೋಧಕವಲ್ಲ ಎಂಬುದಾಗಿ ಈ ಕ್ಷೇತ್ರದಲ್ಲಿನ ತಜ್ಞರು, ಐಟಿ ತಜ್ಞರು ಹೇಳಿದ್ದಾರೆ.
ಮಾಜಿ ಮುಖ್ಯ ಚುನಾವಣಾ ಆಯುಕ್ತ ನವೀನ್ ಚಾವ್ಲಾ ಅವರು ಈ ಮತದಾನ ಯಂತ್ರ ಸುರಕ್ಷಿತ ಎಂದು ಹೇಳಿಕೊಂಡಿದ್ದರೆ,ಐಟಿ ತಜ್ಞರು ಇದನ್ನು ಬಲವಾಗಿ ಆಕ್ಷೇಪಿಸಿ ಈ ಮತಯಂತ್ರಗಳಲ್ಲಿನ ದೋಷಗಳನ್ನು ಆಧಾರಸಹಿತವಾಗಿ ಬಹಿರಂಗಪಡಿಸಿದ್ದರು.
ನವೀನ್ ಚಾವ್ಲಾ ಸಮರ್ಥನೆ :ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮತ್ತೆ ಅಧಿಕಾರಕ್ಕೆ ಬಂದಾಗಲೇ ಈ ಕುರಿತಂತೆ ಅಚ್ಚರಿ, ಸಂಶಯಗಳು ವ್ಯಕ್ತವಾಗಿದ್ದವು. ಮುಖ್ಯಚುನಾವಣಾ ಆಯುಕ್ತರಾಗಿದ್ದ ನವೀನ್ ಚಾವ್ಲಾ ಅವರ ನಿಷ್ಪಕ್ಷಪಾತಿ ನಿಲುವಿನ ಬಗೆಗೂ ಅನುಮಾನಗಳು ವ್ಯಕ್ತವಾಗಿದ್ದುದನ್ನು ಇಲ್ಲಿ ಸ್ಮರಿಸಬಹುದು.
ಈ ಇವಿಎಂಎಸ್ಗಳನ್ನು ಜಾರಿಗೆ ತಂದ ಬಳಿಕ ಇದರಲ್ಲಿ ಅನೇಕ ಅಕ್ರಮ ಎಸಗಲು ಸಾಧ್ಯವಿದೆ. ಈ ಬಗ್ಗೆ ತಜ್ಞರ ಸಮಿತಿಯೊಂದರ ಮುಂದೆ ಬಂದ ವಾದ-ಪ್ರತಿವಾದಗಳನ್ನು ಆಲಿಸಿದಾಗ ಇದು ವ್ಯಕ್ತವಾಗಿದೆ. ಇದರಿಂದಾಗಿ ಭಾರತೀಯ ಮತದಾನ ಯಂತ್ರಗಳು ಸಾಕಷ್ಟು ಸುರಕ್ಷೆ, ಪಾರದರ್ಶಕತೆಗಳನ್ನು ಹೊಂದುವಂತೆ ಮಾಡಿ ಮತದಾರರಲ್ಲಿ ವಿಶ್ವಾಸ ತುಂಬಲು ಹೊಸ ಕ್ರಮಗಳ ಅಗತ್ಯವಿದೆ ಎಂದು ಈ ತಜ್ಞರು ಬೊಟ್ಟು ಮಾಡಿದ್ದಾರೆ.
ಹಾರ್ವರ್ಡ್ ವಿಶ್ವವಿದ್ಯಾಲಯ,ಮೈಕ್ರೋಸಾಫ್ಟ್ ರೀಸರ್ಚ್ ಸೆಂಟರ್ ,ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯಎಟಿ ಅಂಡ್ಟಿ ಶಾನ್ನೂನ್ ಲ್ಯಾಬ್ಸ್, ಮೇರಿಲ್ಯಾಂಡ್ ವಿಶ್ವವಿದ್ಯಾಲಯಯುನಿರ್ವಸಿಟಿ ಆಫ್ ವಾಟರ್ಲೂ,ಯುನಿರ್ವಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೀ ಕ್ಲೀಯರ್ ಬ್ಯಾಲೆಟ್ ಗ್ರೂಪ್, ಇಲೆಕ್ಷನ್ ಆಡಿಟ್ಸ್ನ ಮುಂತಾದ ಪ್ರಮುಖ ಸಂಸ್ಥೆಯ ತಜ್ಞರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಉಪ ಚುನಾವಣಾ ಆಯುಕ್ತ ಅಲೋಕ್ ಶುಕ್ಲಾ, ಮದ್ರಾಸ್ ಐಐಟಿಯ ಮಾಜಿ ನಿರ್ದೇಶಕ ಪಿ.ವಿ.ಇಂದಿರೇಶನ್ ಅವರು ಈ ಮತದಾನ ಯಂತ್ರಗಳಲ್ಲಿ ಸುರಕ್ಷತೆಯ ಕೊರತೆ ಇದೆ ಎಂಬುದನ್ನು ಅಲ್ಲಗಳೆದು, ಇದು ಸಂಪೂರ್ಣ ಸುರಕ್ಷಿತವಾಗಿದೆ. ಇದನ್ನು ಬದಲಾಯಿಸಬೇಕಾದ ಅಗತ್ಯವೇ ಇಲ್ಲ. ಎಲ್ಲ ಆರೋಪಗಳು ಉತ್ಪ್ರೇಕ್ಷಿತವಾಗಿದೆ ಎಂದಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications