Get Updates
Get notified of breaking news, exclusive insights, and must-see stories!

ವೀರೇಂದ್ರ ಹೆಗ್ಗಡೆ ಅವರಿಂದ ದಸರಾ ಉದ್ಘಾಟನೆ

Veerendra Heggade
ಮೈಸೂರು, ಆ. 13 : ವಿಶ್ವವಿಖ್ಯಾತ ದಸರಾ ಮಹೊತ್ಸವವನ್ನು ಈ ಬಾರಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಉದ್ಘಾಟಿಸಲಿದ್ದಾರೆ. ನಗರದಲ್ಲಿ ನಡೆದ ದಸರಾ ಉತ್ತಮ ಮಟ್ಟದ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಈ ವಿಷಯ ಪ್ರಕಟಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು, ಮೇಯರ್ ಸಂಸದರು ಮತ್ತು ಎಲ್ಲಾ ಶಾಸಕರನ್ನು ಒಳಗೊಂಡ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ದಸರಾ ಉದ್ಘಾಟನೆಗೆ ವೀರೇಂದ್ರ ಹೆಗ್ಗಡೆ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ. ಹಾಗೆಯೇ ಕೇಂದ್ರ ಪ್ರವಾಸೋಧ್ಯಮ ಸಚಿವೆ ಕುಮಾರಿ ಸೆಲ್ಜಾ ಅವರನ್ನು ಆಹ್ವಾನಿಸುವುದಾಗಿ ಯಡಿಯೂರಪ್ಪ ಹೇಳಿದರು.

ಸದ್ಯದಲ್ಲೇ ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ರಾಜ ಒಡೆಯರ್ ಅವರಿಗೂ ದಸರೆಗೆ ಅಧಿಕೃತ ಅಹ್ವಾನ ನೀಡಲಾಗುವುದು. ಕಳೆದ ವರ್ಷ ದಸರೆಗೆ 6 ಕೋಟಿ ರುಪಾಯಿ ವೆಚ್ಚ ಮಾಡಲಾಗಿತ್ತು. ಈ ಬಾರಿಯ ದಸರೆಗೆ 9 ಕೋಟಿ ರುಪಾಯಿ ನೀಡುವಂತೆ ಜಿಲ್ಲಾಡಳಿತ ಪ್ರಸ್ತಾವನೆ ಮುಂದಿಟ್ಟಿದೆ. ಇನ್ನೆರಡು ದಿನಗಳಲ್ಲಿ ಮೊದಲ ಹಂತದಲ್ಲಿ 5 ಕೋಟಿ ರುಪಾಯಿಗಳನ್ನು ನೀಡಲಾಗುವುದು ಎಂದು ಯಡಿಯೂರಪ್ಪ ವಿವರಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+