ವೀರೇಂದ್ರ ಹೆಗ್ಗಡೆ ಅವರಿಂದ ದಸರಾ ಉದ್ಘಾಟನೆ

ಜಿಲ್ಲಾ ಉಸ್ತುವಾರಿ ಸಚಿವರು, ಮೇಯರ್ ಸಂಸದರು ಮತ್ತು ಎಲ್ಲಾ ಶಾಸಕರನ್ನು ಒಳಗೊಂಡ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ದಸರಾ ಉದ್ಘಾಟನೆಗೆ ವೀರೇಂದ್ರ ಹೆಗ್ಗಡೆ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ. ಹಾಗೆಯೇ ಕೇಂದ್ರ ಪ್ರವಾಸೋಧ್ಯಮ ಸಚಿವೆ ಕುಮಾರಿ ಸೆಲ್ಜಾ ಅವರನ್ನು ಆಹ್ವಾನಿಸುವುದಾಗಿ ಯಡಿಯೂರಪ್ಪ ಹೇಳಿದರು.
ಸದ್ಯದಲ್ಲೇ ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ರಾಜ ಒಡೆಯರ್ ಅವರಿಗೂ ದಸರೆಗೆ ಅಧಿಕೃತ ಅಹ್ವಾನ ನೀಡಲಾಗುವುದು. ಕಳೆದ ವರ್ಷ ದಸರೆಗೆ 6 ಕೋಟಿ ರುಪಾಯಿ ವೆಚ್ಚ ಮಾಡಲಾಗಿತ್ತು. ಈ ಬಾರಿಯ ದಸರೆಗೆ 9 ಕೋಟಿ ರುಪಾಯಿ ನೀಡುವಂತೆ ಜಿಲ್ಲಾಡಳಿತ ಪ್ರಸ್ತಾವನೆ ಮುಂದಿಟ್ಟಿದೆ. ಇನ್ನೆರಡು ದಿನಗಳಲ್ಲಿ ಮೊದಲ ಹಂತದಲ್ಲಿ 5 ಕೋಟಿ ರುಪಾಯಿಗಳನ್ನು ನೀಡಲಾಗುವುದು ಎಂದು ಯಡಿಯೂರಪ್ಪ ವಿವರಿಸಿದರು.












Click it and Unblock the Notifications