ಬೆಂಗಳೂರು ಸ್ಪೋಟ ರೂವಾರಿ ಮದನಿ ಬಂಧನ ಸನ್ನಿಹಿತ

ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಮದನಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ತಿರಸ್ಕೃತವಾಗಿದ್ದರಿಂದ ಯಾವುದೇ ಕ್ಷಣದಲ್ಲಿ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿಯ ನಾಯಕನನ್ನು ಬಂಧಿಸಬಹುದಾಗಿದೆ. ಇದಕ್ಕಾಗಿ ಕರ್ನಾಟಕದ ಪೊಲೀಸರು ಕೇರಳದ ಪೊಲೀಸರ ಅನುಮತಿಗಾಗಿ ಕಾಯುತ್ತಿದ್ದಾರೆ. ಹೈಕೋರ್ಟಿನ ಆಜ್ಞೆಯನ್ನು ಪ್ರಶ್ನಿಸಿ ಮದಾನಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದಾನೆ.
ಬಂಧನ ಸನ್ನಿಹಿತವಾಗಿದ್ದರಿಂದ ಮದಾನಿ ಬೆಂಬಲಿಗರು ಅರಾಜಕತೆ ಸೃಷ್ಟಿಸಿಬಹುದು ಎಂಬ ಕಾರಣದಿಂದ ಕೊಲ್ಲಂ ಬಳಿಯ ಅನ್ವರ್ಸೆರಿ ಎಂಬ ಪ್ರದೇಶದಲ್ಲಿ ಅಪರಾಧಿ ಪ್ರಕ್ರಿಯಾ ಸಂಹಿತೆಯ 144ನೇ ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆ ಸ್ಥಳದಲ್ಲಿ ಜಮಾಯಿಸಿದ ಜನರನ್ನು ದೂರ ಓಡಿಸಲು ಎರಡು ಸುತ್ತು ಅಶ್ರುವಾಯುವನ್ನು ಸಿಡಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ಪೊಲೀಸರ ನಿಯಂತ್ರಣದಲ್ಲಿದೆ.
ಮದನಿಯ ಮನೆ ಸುತ್ತಮುತ್ತ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದಕ್ಕಾಗಿ ವಿಶೇಷ ಸೇನಾ ಪಡೆಯನ್ನು ಕೂಡ ಕರೆಸಲಾಗಿದೆ. ಕೇರಳ ಪೊಲೀಸರು ಕೂಡ ಮದಾನಿಯನ್ನು ಬಂಧಿಸುವಲ್ಲಿ ಕರ್ನಾಟಕದ ಪೊಲೀಸರಿಗೆ ಎಲ್ಲ ರೀತಿಯಲ್ಲಿ ಸಹಕರಿಸುವುದಾಗಿ ವಾಗ್ದಾನ ನೀಡಿದ್ದಾರೆ.
2008ರ ಜುಲೈ 25ರಂದು ಬೆಂಗಳೂರು ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸತ್ತು ಹಲವಾರು ಜನ ಗಾಯಗೊಂಡಿದ್ದರು. ಕೋಯಂಬತ್ತೂರಿನಲ್ಲಿ ನಡೆದ ಸ್ಫೋಟದಲ್ಲಿ 58 ಜನ ಹತರಾಗಿದ್ದರು. ಆದರೆ, ಕೋಯಂಬತ್ತೂರು ಪ್ರಕರಣದಲ್ಲಿ ಮದನಿಗೆ ಖುಲಾಸೆಯಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications