ಬೆಂಗಳೂರು ಸ್ಪೋಟ ರೂವಾರಿ ಮದನಿ ಬಂಧನ ಸನ್ನಿಹಿತ

ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಮದನಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ತಿರಸ್ಕೃತವಾಗಿದ್ದರಿಂದ ಯಾವುದೇ ಕ್ಷಣದಲ್ಲಿ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿಯ ನಾಯಕನನ್ನು ಬಂಧಿಸಬಹುದಾಗಿದೆ. ಇದಕ್ಕಾಗಿ ಕರ್ನಾಟಕದ ಪೊಲೀಸರು ಕೇರಳದ ಪೊಲೀಸರ ಅನುಮತಿಗಾಗಿ ಕಾಯುತ್ತಿದ್ದಾರೆ. ಹೈಕೋರ್ಟಿನ ಆಜ್ಞೆಯನ್ನು ಪ್ರಶ್ನಿಸಿ ಮದಾನಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದಾನೆ.
ಬಂಧನ ಸನ್ನಿಹಿತವಾಗಿದ್ದರಿಂದ ಮದಾನಿ ಬೆಂಬಲಿಗರು ಅರಾಜಕತೆ ಸೃಷ್ಟಿಸಿಬಹುದು ಎಂಬ ಕಾರಣದಿಂದ ಕೊಲ್ಲಂ ಬಳಿಯ ಅನ್ವರ್ಸೆರಿ ಎಂಬ ಪ್ರದೇಶದಲ್ಲಿ ಅಪರಾಧಿ ಪ್ರಕ್ರಿಯಾ ಸಂಹಿತೆಯ 144ನೇ ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆ ಸ್ಥಳದಲ್ಲಿ ಜಮಾಯಿಸಿದ ಜನರನ್ನು ದೂರ ಓಡಿಸಲು ಎರಡು ಸುತ್ತು ಅಶ್ರುವಾಯುವನ್ನು ಸಿಡಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ಪೊಲೀಸರ ನಿಯಂತ್ರಣದಲ್ಲಿದೆ.
ಮದನಿಯ ಮನೆ ಸುತ್ತಮುತ್ತ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದಕ್ಕಾಗಿ ವಿಶೇಷ ಸೇನಾ ಪಡೆಯನ್ನು ಕೂಡ ಕರೆಸಲಾಗಿದೆ. ಕೇರಳ ಪೊಲೀಸರು ಕೂಡ ಮದಾನಿಯನ್ನು ಬಂಧಿಸುವಲ್ಲಿ ಕರ್ನಾಟಕದ ಪೊಲೀಸರಿಗೆ ಎಲ್ಲ ರೀತಿಯಲ್ಲಿ ಸಹಕರಿಸುವುದಾಗಿ ವಾಗ್ದಾನ ನೀಡಿದ್ದಾರೆ.
2008ರ ಜುಲೈ 25ರಂದು ಬೆಂಗಳೂರು ಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸತ್ತು ಹಲವಾರು ಜನ ಗಾಯಗೊಂಡಿದ್ದರು. ಕೋಯಂಬತ್ತೂರಿನಲ್ಲಿ ನಡೆದ ಸ್ಫೋಟದಲ್ಲಿ 58 ಜನ ಹತರಾಗಿದ್ದರು. ಆದರೆ, ಕೋಯಂಬತ್ತೂರು ಪ್ರಕರಣದಲ್ಲಿ ಮದನಿಗೆ ಖುಲಾಸೆಯಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications