ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ.13 : ಕಡೂರು, ಗುಲ್ಬರ್ಗಾ ಮರು ಚುನಾವಣೆ

By Mrutyunjaya Kalmat
|
Google Oneindia Kannada News

EVM
ಬೆಂಗಳೂರು, ಆ. 14 : ಕರ್ನಾಟಕದ ಕಡೂರು ಮತ್ತು ಗುಲ್ಬಗಾ ದಕ್ಷಿಣ ಕ್ಷೇತ್ರದ ವಿಧಾನಸಭೆಯ ಮರು ಚುನಾವಣೆ ಸೆಪ್ಟೆಂಬರ್ 13 ರಂದು ನಡೆಯಲಿವೆ. ಕಡೂರು ಶಾಸಕ ಕೆ ಎಂ ಕೃಷ್ಣಮೂರ್ತಿಮತ್ತು ಗುಲ್ಬರ್ಗಾ ದಕ್ಷಿಣ ಕ್ಷೇತ್ರದ ಶಾಸಕ ಚಂದ್ರಶೇಖರ್ ಪಾಟೀಲ್ ರೇವೂರ ಅವರ ನಿಧನದಿಂದ ಈ ಸ್ಥಾನಗಳು ತೆರವಾಗಿವೆ.

ಅ.18 ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಆ.25 ಕೊನೆಯ ದಿನವಾಗಿದೆ. ಆ.26 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಆ.28 ಕೊನೆಯ ದಿನವಾಗಿದೆ. ಸೆ. 13 ರಂದು ಮತದಾನ ನಡೆಯಲಿದೆ. ಸೆ. 16 ರಂದು ಮತ ಎಣಿಕೆ ನಡೆಯಲಿದೆ. ಕಡೂರು ಮತ್ತು ಗುಲ್ಬರ್ಗಾ ದಕ್ಷಿಣ ಕ್ಷೇತ್ರದಲ್ಲಿ ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಎಲ್ಲ ಅಭ್ಯರ್ಥಿಗಳಿಗೂ, ರಾಜಕೀಯ ಪಕ್ಷಗಳು, ರಾಜ್ಯ ಮತ್ತು ಕೇಂದ್ರ ಸರಕಾರಕ್ಕೂ ಅನ್ವಯಿಸಲಿದೆ. ಮತದಾನಕ್ಕೆ ಎಲೆಕ್ಟ್ರಾನಿಕ್ ಮಷೀನ್ ಗಳನ್ನು ಬಳಸಲಾಗುವುದು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X