ಬೆಂಗಳೂರು ಪೊಲೀಸರ ವಶಕ್ಕೆ ಅಬ್ದುಲ್ ಮದನಿ

ಕಳೆದ ಏಳು ದಿನಗಳಿಂದ ಮದನಿಯನ್ನು ವಶಪಡಿಸಿಕೊಳ್ಳಲು ಕರ್ನಾಟಕದ ಪೊಲೀಸರು ಕೇರಳದಲ್ಲಿ ಬೀಡುಬಿಟ್ಟಿದ್ದರು. ಕರ್ನಾಟಕ ಉಚ್ಚ ನ್ಯಾಯಾಲಯ ಆತನ ನಿರೀಕ್ಷಣಾ ಜಾಮೀನನ್ನು ವಜಾಗೊಳಿಸಿತ್ತು. ಇಂದು ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ವಿಚಾರಣೆಗೆ ಬರಲಿತ್ತು. ಅದಕ್ಕೂ ಮೊದಲೇ ಆತನನ್ನು ಭಾರೀ ಬಿಗಿ ಬಂದೋಬಸ್ತಿನಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ.
ನ್ಯಾಯಾಲಯದಿಂದ ಸಹಾಯ ದೊರೆಯದೆಂದು ತಿಳಿದ ನಂತರ ತಾನೇ ಕೋರ್ಟಿಗೆ ಶರಣಾಗುವುದಾಗಿ ಆತ ಇಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದ. ತನಗೆ ಕರ್ನಾಟಕ ಪೊಲೀಸರಿಂದ ಯಾವುದೇ ವಾರಂಟ್ ದೊರೆತಿಲ್ಲ ಮತ್ತು ತಾನು ಯಾವುದೇ ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ, ತಾನು ನಿರಪರಾಧಿಯಾಗಿದ್ದೇನೆ ಎಂದು ಹೇಳಿದ್ದ. ಬೆಂಗಳೂರು ಸ್ಫೋಟದಲ್ಲಿ ಭಾಗಿಯಾಗಿದ್ದವರಿಗೆ ಆಶ್ರಯ ನೀಡಿದ ಆರೋಪ ಮದನಿ ಹೊತ್ತಿದ್ದಾನೆ. ಆತನಿಗೆ ಬೆಂಗಳೂರು ಸ್ಫೋಟದ ಬಗ್ಗೆ ಮಾಹಿತಿಯೂ ಇತ್ತು ಎನ್ನಲಾಗಿದೆ.
ಕೇರಳದಲ್ಲಿ ಮದನಿ ಒಂದು ಕೋಮಿಗೆ ಸೇರಿದ ಅತ್ಯಂತ ಪ್ರಭಾವಿ ನಾಯಕನಾಗಿರುವುದರಿಂದ ಆತನ ನಿವಾಸದ ಸುತ್ತ ಭಾರೀ ಪೊಲೀಸ್ ಭದ್ರತೆ ನೀಡಲಾಗಿತ್ತು. ಕರ್ನಾಟಕದಿಂದ ಕೇರಳಕ್ಕೆ ತೆರಳಿದ್ದ ಎಸಿಪಿ ಓಂಕಾರಯ್ಯ, ಅಲೋಕ್ ಮುಂತಾದವರ ತಂಡ ಕೊನೆಗೂ ಮದನಿಯನ್ನು ತಮ್ಮ ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇಂದು ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಬಹುಶಃ ನಾಳೆ ಕರ್ನಾಟಕಕ್ಕೆ ಕರೆತರಲಾಗುತ್ತಿದೆ.
ಅಬ್ದುಲ್ ಮದನಿ ಯಾರು? ಆತನ ಪ್ರತಾಪಗಳೇನು?
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications