ಬೆಂಗಳೂರು ಪೊಲೀಸರ ವಶಕ್ಕೆ ಅಬ್ದುಲ್ ಮದನಿ

ಕಳೆದ ಏಳು ದಿನಗಳಿಂದ ಮದನಿಯನ್ನು ವಶಪಡಿಸಿಕೊಳ್ಳಲು ಕರ್ನಾಟಕದ ಪೊಲೀಸರು ಕೇರಳದಲ್ಲಿ ಬೀಡುಬಿಟ್ಟಿದ್ದರು. ಕರ್ನಾಟಕ ಉಚ್ಚ ನ್ಯಾಯಾಲಯ ಆತನ ನಿರೀಕ್ಷಣಾ ಜಾಮೀನನ್ನು ವಜಾಗೊಳಿಸಿತ್ತು. ಇಂದು ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ವಿಚಾರಣೆಗೆ ಬರಲಿತ್ತು. ಅದಕ್ಕೂ ಮೊದಲೇ ಆತನನ್ನು ಭಾರೀ ಬಿಗಿ ಬಂದೋಬಸ್ತಿನಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ.
ನ್ಯಾಯಾಲಯದಿಂದ ಸಹಾಯ ದೊರೆಯದೆಂದು ತಿಳಿದ ನಂತರ ತಾನೇ ಕೋರ್ಟಿಗೆ ಶರಣಾಗುವುದಾಗಿ ಆತ ಇಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದ. ತನಗೆ ಕರ್ನಾಟಕ ಪೊಲೀಸರಿಂದ ಯಾವುದೇ ವಾರಂಟ್ ದೊರೆತಿಲ್ಲ ಮತ್ತು ತಾನು ಯಾವುದೇ ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ, ತಾನು ನಿರಪರಾಧಿಯಾಗಿದ್ದೇನೆ ಎಂದು ಹೇಳಿದ್ದ. ಬೆಂಗಳೂರು ಸ್ಫೋಟದಲ್ಲಿ ಭಾಗಿಯಾಗಿದ್ದವರಿಗೆ ಆಶ್ರಯ ನೀಡಿದ ಆರೋಪ ಮದನಿ ಹೊತ್ತಿದ್ದಾನೆ. ಆತನಿಗೆ ಬೆಂಗಳೂರು ಸ್ಫೋಟದ ಬಗ್ಗೆ ಮಾಹಿತಿಯೂ ಇತ್ತು ಎನ್ನಲಾಗಿದೆ.
ಕೇರಳದಲ್ಲಿ ಮದನಿ ಒಂದು ಕೋಮಿಗೆ ಸೇರಿದ ಅತ್ಯಂತ ಪ್ರಭಾವಿ ನಾಯಕನಾಗಿರುವುದರಿಂದ ಆತನ ನಿವಾಸದ ಸುತ್ತ ಭಾರೀ ಪೊಲೀಸ್ ಭದ್ರತೆ ನೀಡಲಾಗಿತ್ತು. ಕರ್ನಾಟಕದಿಂದ ಕೇರಳಕ್ಕೆ ತೆರಳಿದ್ದ ಎಸಿಪಿ ಓಂಕಾರಯ್ಯ, ಅಲೋಕ್ ಮುಂತಾದವರ ತಂಡ ಕೊನೆಗೂ ಮದನಿಯನ್ನು ತಮ್ಮ ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇಂದು ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಬಹುಶಃ ನಾಳೆ ಕರ್ನಾಟಕಕ್ಕೆ ಕರೆತರಲಾಗುತ್ತಿದೆ.
ಅಬ್ದುಲ್ ಮದನಿ ಯಾರು? ಆತನ ಪ್ರತಾಪಗಳೇನು?
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications