ಗೋಹತ್ಯೆ ಕಾಯ್ದೆಗೆ ಅಂಕಿತ ಬೇಡ ಕಾಂಗ್ರೆಸ್ ಮನವಿ

ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಂಸದೆ ತೇಜಸ್ವಿನಿ, ಶಾಸಕ ರಮಾನಾಥ ರೈ, ಬಿ.ಸಿ. ಪಾಟೀಲ್ , ರೋಷನ್ ಬೇಗ್, ಅಭಯಚಂದ್ರ ಜೈನ್ ಸೇರಿದಂತೆ ಸಂಸದರು, ಶಾಸಕರು, ಮುಖಂಡರಿದ್ದ 50 ಮಂದಿಯ ಕಾಂಗ್ರೆಸ್ ನಿಯೋಗ ಸೋಮವಾರ ಪ್ರತಿಭಾ ಅವರನ್ನು ಭೇಟಿ ಮಾಡಿ ಮನವಿ ಮಾಡಿತು.
ಬಿಜೆಪಿ ಸರ್ಕಾರ ಕೋಮು ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಗೋಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಯತ್ನಿಸುತ್ತಿದೆ. ಮಸೂದೆಗೆ ಅಂಕಿತ ದೊರೆತಲ್ಲಿ ಕೋಮು ಸಂಘರ್ಷಗಳು ಸಂಭವಿಸುವ ಸಾಧ್ಯತೆಗಳಿವೆ. ಬಡವರ, ಹಿಂದುಳಿದವರ ಆಹಾರ ಪದ್ಧತಿಯ ಮೇಲೆ ಸರ್ಕಾರ ಸವಾರಿ ಮಾಡಲು ಹೊರಟಿದೆ ಎಂದು ಕಾಂಗ್ರೆಸ್ ನಾಯಕರು ಮುಂಬರಬಹುದಾದ ದುಷ್ಪರಿಣಾಮಗಳ ಕುರಿತು ರಾಷ್ಟ್ರಪತಿಯವರ ಮನವರಿಕೆ ಮಾಡಿದ್ದಾರೆ.
ರಾಜ್ಯ ವಿಧಾನಸಭೆ ಮತ್ತು ಪರಿಷತ್ಗಳಲ್ಲಿ ಅಂಗೀಕಾರ ಪಡೆದುಕೊಂಡಿದ್ದ ಗೋಹತ್ಯಾ ನಿಷೇಧ ಕಾಯ್ದೆಯನ್ನು ಸರ್ಕಾರವು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ಕಳುಹಿಸಿತ್ತು. ಆದರೆ ಇದಕ್ಕೆ ಸಹಿ ಹಾಕುವ ಬದಲು, ರಾಷ್ಟ್ರಪತಿಯವರ ನಿರ್ಧಾರಕ್ಕೆಂದು ರಾಜ್ಯಪಾಲರು ಕಡತವನ್ನು ದಿಲ್ಲಿಗೆ ವರ್ಗಾಯಿಸಿದ್ದರು. ಇದೀಗ ಕಾಂಗ್ರೆಸ್ ಹಾಗೂ ಜೆಡಿಎಸ್ನಿಂದ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳ ನಿರ್ಧಾರ ಕುತೂಹಲ ಕೆರಳಿಸಿದೆ.
ಗ್ಯಾಲರಿ:ರಾಷ್ಟ್ರಪತಿ ಭವನದಲ್ಲಿ ಕಾಂಗೈ ನಾಯಕರ ಗ್ರೂಪ್ ಫೋಟೋ | ಬಿಜೆಪಿ ಜನಜಾಗೃತಿ ಸಮಾವೇಶ ಚಿತ್ರಗಳು |
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications