ತಿಮ್ಮಪ್ಪನ ಸನ್ನಿಧಿಯಲ್ಲಿ ಹಣ ಗೋವಿಂದ?

ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಪೂಜೆಗಾಗಿ ಮುಂಗಡವಾಗಿ ನೀಡುವ ಟಿಕೆಟ್ ನಲ್ಲಿ(Arjitha Seva) ಭಾರಿ ಭ್ರಷ್ಟಾಚಾರ ನಡೆದಿದೆ ಎನ್ನುವುದು ಒಂದಾದರೆ, ವೆಂಕಟೇಶ್ವರನಿಗೆ ಸೇರಿದ 500 ವರ್ಷಗಳ ಹಿಂದಿನ ಚಿನ್ನಾಭರಣಗಳು ಕಾಣಿಯಾಗಿರುವ ಸಂಗತಿ ಬೆಳಕಿಗೆ ಬಂದಿರುವುದು ಕೋಟ್ಯಂತರ ಭಕ್ತರಲ್ಲಿ ಬೇಸರವನ್ನು ತರಿಸಿದೆ.
ಟಿಟಿಡಿಯಲ್ಲಿ ನಡೆದಿರುವ ಹಣಕಾಸು ಅವ್ಯವಹಾರ ರಾಜಕೀಯ ತಿರುವು ಪಡೆದುಕೊಂಡಿದ್ದು, ತೆಲುಗು ದೇಶಂ ಪಾರ್ಟಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ತಿರುಪತಿಯ ಶಾಸಕ ಹಾಗೂ ಪ್ರಜಾರಾಜ್ಯಂ ಪಕ್ಷದ ಅಧ್ಯಕ್ಷ ಚಿರಂಜೀವಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣಕಾಸು ಅವ್ಯವಹಾರ ಮತ್ತು ಚಿನ್ನಾಭರಣಗಳ ನಾಪತ್ತೆಯಾಗಿರುವುದು ಕೋಟ್ಯಂತರ ಭಕ್ತಾಧಿಗಳ ನಂಬಿಕೆಗೆ ಕೊಡಲಿ ಏಟು ನೀಡಿದಂತಾಗಿದೆ. ಸರಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಅನೇಕ ಸಂಶಯಗಳಿಗೆ ಕಾರಣವಾಗಿದೆ ಎಂದು ದೂರಿದ್ದಾರೆ.
ಉದ್ಯಮಿ ಹಾಗೂ ಟಿಟಿಡಿಯ ಅಧ್ಯಕ್ಷ ಡಿ ಕೆ ಆದಿಕೇಶವಲು ಅವರು ಹಣಕಾಸು ಅವ್ಯವಹಾರದಲ್ಲಿ ಪಾಲ್ಗೊಳ್ಳುವ ಮೂಲಕ ಭಕ್ತರ ನಂಬಿಕೆಗೆ ದ್ರೋಹ ಎಸಗಿದ್ದಾರೆ. ಅಲ್ಲದೆ, ಟಿಟಿಡಿಯ ಸದಸ್ಯರ ಆಪ್ತ ಕಾರ್ಯದರ್ಶಿಗಳು ಪ್ರಭಾವ ಬೆಳಸಿ ಪೂಜೆಯ ಮುಂಗಡ ಟಿಕೆಟ್ ಗಳನ್ನು ಪಡೆದುಕೊಂಡು ಭಕ್ತಾಧಿಗಳಿಗೆ ನಿಗದಿತ ಹಣಕ್ಕಿಂತ ಹೆಚ್ಚು ಹಣಕ್ಕೆ ಟಿಕೆಟ್ ಮಾರಾಟ ಮಾಡಿದ್ದಾರೆ. ಸುಮಾರು 50 ಕೋಟಿ ರುಪಾಯಿಗಳ ಅವ್ಯವಹಾರ ಇದಾಗಿದೆ. ಇದು ಸದಸ್ಯರ ಮೂಗಿನ ಕೆಳಗೆ ನಡೆಯುತ್ತಿದೆ ಎಂದು ವಿರೋಧ ಪಕ್ಷಗಳು ಗಂಭೀರ ಆರೋಪ ಮಾಡಿವೆ. ಟಿಟಿಡಿಯ ಹಿಂದಿನ ಅಧ್ಯಕ್ಷ ಕರುಣಾಕರರೆಡ್ಡಿ ಮೇಲಿಯೂ ಭ್ರಷ್ಟಾಚಾರದ ಆರೋಪ ಮಾಡಲಾಗಿದೆ.
ಸಿಬಿಐ ತನಿಖೆಗೆ ವಹಿಸಿ : ಕರುಣಾಕರರೆಡ್ಡಿ
ಭ್ರಷ್ಟಾಚಾರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಟಿಟಿಡಿ ಮಾಜಿ ಅಧ್ಯಕ್ಷ ಬಿ ಕರುಣಾಕರರೆಡ್ಡಿ, ವಿರೋಧ ಪಕ್ಷಗಳು ನನ್ನ ಮೇಲೆ ಮಾಡುತ್ತಿರುವ ಆರೋಪ ಶುದ್ಧ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ಟಿಟಿಡಿ ಅವ್ಯವಹಾರದ ಬಗ್ಗೆ ಸಿಬಿಐ ತನಿಖೆ ಇಲ್ಲವೇ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ರಾಜ್ಯಪಾಲರನ್ನು ಭೇಟಿ ಮನವಿ ಸಲ್ಲಿಸಿದ್ದಾರೆ.
ಈ ಬಗ್ಗೆ ಸರಕಾರ 48ಗಂಟೆಯೊಳಗೆ ಕ್ರಮಕೈಗೊಳ್ಳದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಅವರು ಬೆದರಿಕೆ ಹಾಕಿದ್ದಾರೆ. ಟಿಟಿಡಿಯ ಅಧ್ಯಕ್ಷನಾಗಿದ್ದಾಗ ನಾನು ನಿಶ್ವಾರ್ಥದಿಂದ ಕೆಲಸ ಮಾಡಿರುವೆ. ನನ್ನ ಮೇಲೆ ಅವ್ಯವಹಾರದ ಆಪಾದನೆ ಬಂದಿರುವುದು ನೋವು ತಂದಿದೆ ಎಂದು ಕರುಣಾಕರರೆಡ್ಡಿ ಹೇಳಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications