ಮದನಿ ಬಂಧನ : ಮಂಗಳೂರಿನಲ್ಲಿ ಕಟ್ಟೆಚ್ಚರ

2008ರ ಜುಲೈ 25ರಂದು ನಡೆದ ಭೀಕರ ಸರಣಿ ಸ್ಫೋಟದ ಆರೋಪಿ ಮದನಿಗೆ ಮಂಗಳೂರಿನಲ್ಲಿ ಅನೇಕ ಬೆಂಬಲಿಗರು ಇದ್ದಾರೆ ಎಂಬ ಮುನ್ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಮದನಿಯನ್ನು ಕೇರಳದಲ್ಲಿ ಕರ್ನಾಟಕ ಪೊಲೀಸರು ಆಗಸ್ಟ್ 16ರಂದು ಬಂಧಿಸಿದ್ದರು. ನಿನ್ನೆಯೇ ಆತನನ್ನು ಬೆಂಗಳೂರಿಗೆ ಕರೆತರಲಾಗಿದೆ.
ಕೋಮು ಗಲಭೆ ಮಂಗಳೂರಿನಲ್ಲಿ ಹೊಸದೇನಲ್ಲ. ಅದರಲ್ಲೂ ಕೇರಳದ ಪ್ರಭಾವಿ ರಾಜಕಾರಣಿ ಮತ್ತು ಮುಸ್ಲಿಂ ಧರ್ಮ ಪ್ರತಿಪಾದಕ ಅಬ್ದುಲ್ ನಾಸಿರ್ ಮದನಿಗೆ ಮಂಗಳೂರಿನಲ್ಲಿ ಅನೇಕ ಬೆಂಬಲಿಗರು ಇರುವುದು ತಿಳಿದುಬಂದಿದೆ. ಆತನ ಬಂಧನ ಇಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸಬದೆಂದು ಪೊಲೀಸ್ ಇಲಾಖೆ ಈ ಮುನ್ನೆಚ್ಚರಿಕೆ ತೆಗೆದುಕೊಂಡಿದೆ.
ಬೆಂಗಳೂರು ವರದಿ : ಅಬ್ದುಲ್ ಮದನಿಯನ್ನು ಇಂದು ಬೆಂಗಳೂರಿನ ಒಂದನೇ ಹೆಚ್ಚುವರಿ ದಂಡಾಧಿಕಾರಿ ವೆಂಕಟೇಶ್ ಹುಲಗಿಯವರ ಮುಂದೆ ಹಾಜರುಪಡಿಸಲಾಯಿತು. ಹತ್ತು ದಿನಗಳ ಕಾಲ ಅಂದರೆ ಆಗಸ್ಟ್ 26ರವರೆಗೆ ಆತನನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಮದನಿಯನ್ನು ರಹಸ್ಯ ಸ್ಥಳವೊಂದರಲ್ಲಿ ಬಂಧಿಸಿಡಲಾಗಿದ್ದು, ಬೆಂಗಳೂರು ಸರಣಿ ಸ್ಫೋಟದಲ್ಲಿ ಆತನ ಕೈವಾಡಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ವಿಚಾರಣೆ ನಡೆಸಿದರು. ಆತನಿರುವ ಸ್ಥಳವನ್ನು ಭದ್ರತೆಯ ಕಾರಣ ಪೊಲೀಸರು ಬಹಿರಂಗಪಡಿಸುತ್ತಿಲ್ಲ. ಬೆಂಗಳೂರು ಸ್ಫೋಟ ಪ್ರಕರಣದಲ್ಲಿ 32 ಆರೋಪಿಗಳ ಆರೋಪ ಪಟ್ಟಿಯಲ್ಲಿ 31ನೆಯವನಾಗಿರುವ ಮದನಿಗೆ ಎಲ್ಲ ರೀತಿಯ ವೈದ್ಯಕೀಯ ನೆರವು ಮತ್ತು ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕೆಂದು ಮ್ಯಾಜಿಸ್ಟ್ರೇಟ್ ಪೊಲೀಸರಿಗೆ ಆದೇಶ ನೀಡಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications