ಮದನಿ ಬಂಧನ : ಮಂಗಳೂರಿನಲ್ಲಿ ಕಟ್ಟೆಚ್ಚರ

2008ರ ಜುಲೈ 25ರಂದು ನಡೆದ ಭೀಕರ ಸರಣಿ ಸ್ಫೋಟದ ಆರೋಪಿ ಮದನಿಗೆ ಮಂಗಳೂರಿನಲ್ಲಿ ಅನೇಕ ಬೆಂಬಲಿಗರು ಇದ್ದಾರೆ ಎಂಬ ಮುನ್ಸೂಚನೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಮದನಿಯನ್ನು ಕೇರಳದಲ್ಲಿ ಕರ್ನಾಟಕ ಪೊಲೀಸರು ಆಗಸ್ಟ್ 16ರಂದು ಬಂಧಿಸಿದ್ದರು. ನಿನ್ನೆಯೇ ಆತನನ್ನು ಬೆಂಗಳೂರಿಗೆ ಕರೆತರಲಾಗಿದೆ.
ಕೋಮು ಗಲಭೆ ಮಂಗಳೂರಿನಲ್ಲಿ ಹೊಸದೇನಲ್ಲ. ಅದರಲ್ಲೂ ಕೇರಳದ ಪ್ರಭಾವಿ ರಾಜಕಾರಣಿ ಮತ್ತು ಮುಸ್ಲಿಂ ಧರ್ಮ ಪ್ರತಿಪಾದಕ ಅಬ್ದುಲ್ ನಾಸಿರ್ ಮದನಿಗೆ ಮಂಗಳೂರಿನಲ್ಲಿ ಅನೇಕ ಬೆಂಬಲಿಗರು ಇರುವುದು ತಿಳಿದುಬಂದಿದೆ. ಆತನ ಬಂಧನ ಇಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸಬದೆಂದು ಪೊಲೀಸ್ ಇಲಾಖೆ ಈ ಮುನ್ನೆಚ್ಚರಿಕೆ ತೆಗೆದುಕೊಂಡಿದೆ.
ಬೆಂಗಳೂರು ವರದಿ : ಅಬ್ದುಲ್ ಮದನಿಯನ್ನು ಇಂದು ಬೆಂಗಳೂರಿನ ಒಂದನೇ ಹೆಚ್ಚುವರಿ ದಂಡಾಧಿಕಾರಿ ವೆಂಕಟೇಶ್ ಹುಲಗಿಯವರ ಮುಂದೆ ಹಾಜರುಪಡಿಸಲಾಯಿತು. ಹತ್ತು ದಿನಗಳ ಕಾಲ ಅಂದರೆ ಆಗಸ್ಟ್ 26ರವರೆಗೆ ಆತನನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಮದನಿಯನ್ನು ರಹಸ್ಯ ಸ್ಥಳವೊಂದರಲ್ಲಿ ಬಂಧಿಸಿಡಲಾಗಿದ್ದು, ಬೆಂಗಳೂರು ಸರಣಿ ಸ್ಫೋಟದಲ್ಲಿ ಆತನ ಕೈವಾಡಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ವಿಚಾರಣೆ ನಡೆಸಿದರು. ಆತನಿರುವ ಸ್ಥಳವನ್ನು ಭದ್ರತೆಯ ಕಾರಣ ಪೊಲೀಸರು ಬಹಿರಂಗಪಡಿಸುತ್ತಿಲ್ಲ. ಬೆಂಗಳೂರು ಸ್ಫೋಟ ಪ್ರಕರಣದಲ್ಲಿ 32 ಆರೋಪಿಗಳ ಆರೋಪ ಪಟ್ಟಿಯಲ್ಲಿ 31ನೆಯವನಾಗಿರುವ ಮದನಿಗೆ ಎಲ್ಲ ರೀತಿಯ ವೈದ್ಯಕೀಯ ನೆರವು ಮತ್ತು ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕೆಂದು ಮ್ಯಾಜಿಸ್ಟ್ರೇಟ್ ಪೊಲೀಸರಿಗೆ ಆದೇಶ ನೀಡಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications