1 ರೂಗೆ ಮರ್ಸಿಡಿಸ್ ಬೆಂಜ್ ಬಸ್ ನಲ್ಲಿ ಓಡಾಡಿ

ಬುಧವಾರ ಪತ್ರಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು ಮರ್ಸಿಡಿಸ್ ಬೆಂಜ್ ಸಂಸ್ಥೆ ಈ ಬಸ್ಸುಗಳನ್ನು ಮೂರು ತಿಂಗಳಕಾಲ ಉಚಿತವಾಗಿ ಬೆಂಗಳೂರು ನಗರ ಸಾರಿಗೆ ಸಂಸ್ಥೆಗೆ ನೀಡುತ್ತಿದ್ದು, ಇವುಗಳ ಉಪಯುಕ್ತತೆ ಬಗ್ಗೆ ಸಾರ್ವಜನಿಕರ ಅಭಿಪ್ರಾಯವನ್ನು ಆಧರಿಸಿ ಈ ಮಾದರಿಯ ಬಸ್ಸುಗಳನ್ನು ಖರೀದಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ ಡೈಲಿಪಾಸ್ಗಳ ಮರುಮಾರಾಟ ಜಾಲ ಸೃಷ್ಟಿಯಾಗಿ ಅದರಲ್ಲೂ ಹೊಸಕೋಟೆ, ಆನೇಕಲ್ ನೆಲಮಂಗಲದಲ್ಲಿ ಇದು ಹೆಚ್ಚಾಗಿದ್ದ ಕಾರಣ ಗುರುತಿನ ಕಾರ್ಡುಗಳನ್ನು ಬಳಕೆಗೆ ತರಲಾಗಿದೆ ಎಂದು ಸಚಿವ ಅಶೋಕ್ ತಿಳಿಸಿದರು.
ಹಾಲಿ ನಗರದಲ್ಲಿ ಸಂಚರಿಸುವ ವೊಲ್ವೋ ಬಸ್ಸುಗಳಲ್ಲಿ ಪ್ರಯಾಣಿಕರಿಗೆ ಉಚಿತ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು. ಆರಂಭಿಕವಾಗಿ ವಿಮಾನನಿಲ್ದಾಣದಿಂದ ಸಂಚರಿಸುವ ಒಂದು ಬಸ್ಸಿನಲ್ಲಿ ಈ ಸೌಲಭ್ಯವನ್ನು ಒದಗಿಸಲಾಗುತ್ತದೆಂದು ಸಚಿವರು ತಿಳಿಸಿದರು.
ಪರಿಸರ ಸ್ನೇಹಿ ಇಲಾಖೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳಲ್ಲಿ ಡೀಸೆಲ್ ಜೊತೆಗೆ ಎಥನಾಲ್ ಬಳಕೆ ಬಗ್ಗೆ ಮಾತನಾಡುತ್ತಾ ಮೈಸೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಮತ್ತು ಹಾಸನ ಡಿಪೋಗಳ 1200 ಬಸ್ಸುಗಳಲ್ಲಿ ಶೇ.7.7 ರಷ್ಟು ಎಥನಾಲ್ ಬಳಕೆ ಮಾಡಲಾಗುತ್ತಿದ್ದು ಇಂಧನ ಉಳಿತಾಯವಾಗುತ್ತಿದೆ.
ಎಥನಾಲ್ ಉಪಯೋಗದಿಂದ ವಾಯು ಮಾಲಿನ್ಯವು ಕಡಿಮೆಯಾಗಲಿದೆ. ಎಥನಾಲ್ ಬಳಕೆಯ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ. ಕಳೆದ ವರ್ಷ 11 ಲಕ್ಷ ಲೀಟರ್ ಎಥನಾಲ್ ಉಪಯೋಗಿಸಲಾಗಿತ್ತು.
ಪ್ರಸಕ್ತ ವರ್ಷದಲ್ಲಿ 40 ಲಕ್ಷ ಲೀಟರ್ ಎಥನಾಲ್ ಖರೀದಿಸಲು ಟೆಂಡರ್ ಕರೆಯಲಾಗಿದೆ ಎಂದರು. ಸಾರಿಗೆ ವೆಚ್ಚ ಹೊರತುಪಡಿಸಿದಲ್ಲಿ ಒಂದು ಲೀಟರ್ ಎಥನಾಲ್ ಬೆಲೆ 18.40 ರೂ. ಎಥನಾಲ್ ಕಬ್ಬಿನಿಂದ ಉತ್ಪತ್ತಿಮಾಡಲಾಗುವುದರಿಂದ ಕಬ್ಬಿನ ಬೆಳೆಗಾರರಿಗೆ ಬಹಳ ಉಪಯೋಗವಾಗಲಿದೆ ಎಂದು ಅವರು ತಿಳಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications