ಫುಟ್ಪಾತ್ ವ್ಯಾಪಾರಿಗಳಿಗೆ ಮೈಕ್ರೋ ಫೈನಾನ್ಸ್

ರಾಜ್ಯದ ಪಟ್ಟಣ ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರ ಮಾಡುವ ಕಡುಬಡವರು ಸಾಲದ ಸಂಕಷ್ಟದಲ್ಲಿ ಸಿಲುಕುತ್ತಿರುವ ಹಿನ್ನೆಲೆಯಲ್ಲಿ ಬಾಂಗ್ಲಾ ದೇಶದ ಮಾದರಿಯಲ್ಲಿ ಮೈಕ್ರೋ ಫೈನಾನ್ಸ್ ಸೌಲಭ್ಯ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಲೇವಾದೇವಿ ವ್ಯವಹಾರಸ್ಥರಿಂದ ರಸ್ತೆ ಬದಿ ವ್ಯಾಪಾರಿಗಳಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸುವ ಸಲುವಾಗಿ ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಹೆಜ್ಜೆಯಿರಿಸಿದೆ ಎಂದು ಹೇಳಿದರು.
ಪ್ರಸ್ತುತ ಬಾಂಗ್ಲಾದೇಶದಲ್ಲಿ ಮಾತ್ರ ಈ ರೀತಿಯ ಯೋಜನೆ ಜಾರಿಯಾಗಿದ್ದು, (ನೊಬೇಲ್ ಪ್ರಶಸ್ತಿ ವಿಜೇತ ಮಹಮದ್ ಯೂನಸ್ ಆರಂಭಿಸಿದ್ದು)ಅದ್ಭುತ ಯಶಸ್ಸು ಕಂಡಿದೆ. ಆದ್ದರಿಂದ ಸದರಿ ಯೋಜನೆಯನ್ನು ರಾಜ್ಯದಲ್ಲಿ ಜಾರಿ ಮಾಡುವ ಮುನ್ನ ಸಾಧಕಬಾಧಕ ಕುರಿತಂತೆ ಪರಿಶೀಲಿಸುವ ಸಲುವಾಗಿ ಸಹಕಾರ ಇಲಾಖೆಯ ಹಿರಿಯ ಅಕಾರಿಗಳು ಸದ್ಯದಲ್ಲೇ ಬಾಂಗ್ಲಾ ದೇಶಕ್ಕೆ ತೆರಳಿ ಅಧ್ಯಯನ ನಡೆಸಲಿದ್ದಾರೆ ಎಂದು ತಿಳಿಸಿದರು.
ಈ ಯೋಜನೆ ಅನುಷ್ಠಾನಗೊಂಡಲ್ಲಿ ರಸ್ತೆ ಬದಿ ವ್ಯಾಪಾರಿಗಳಿಗೆ ನೂರು ರೂಪಾಯಿಗೆ ವಾರ್ಷಿಕ ಹತ್ತು ರೂ.ಗಳ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಮೀಟರ್ ಬಡ್ಡಿ ದಂಧೆ ನಡೆಸುವವರು ರಸ್ತೆ ಬದಿ ವ್ಯಾಪಾರಿಗಳಿಗೆ ಬೆಳಗ್ಗೆ ನೂರು ರೂ. ನೀಡಿ ಸಂಜೆ ನೂರ ಹತ್ತು ರೂ. ಪಡೆಯುತ್ತಾರೆ.
ಇದು ವ್ಯಾಪಾರಸ್ಥರ ಮೇಲೆ ಮಾಡುತ್ತಿರುವ ದಬ್ಬಾಳಿಕೆಯಾಗಿದ್ದು, ಅದನ್ನು ತಪ್ಪಿಸುವ ಸಲುವಾಗಿಯೇ ಈ ರೀತಿಯ ಜಾರಿ ಮಾಡಲು ಉದ್ದೇಶಿಸಲಾಗಿದೆ ಎಂದ ಅವರು, ಲೇವಾದೇವಿ ವ್ಯವಹಾರಸ್ಥರು, ಗಿರವಿದಾರರು ಹಾಗೂ ಮೀಟರ್ ಬಡ್ಡಿ ದಂಧೆಯ ಮಂದಿ ಈ ಯೋಜನೆಗೆ ಯಾವುದೇ ರೀತಿಯ ಅಡ್ಡಿ ಮಾಡದಂತೆ ಹಾಗೂ ರಸ್ತೆ ಬದಿ ವ್ಯಾಪಾರಿಗಳಿಗೆ ಯಾವುದೇ ರೀತಿಯಲ್ಲೂ ಕಿರುಕುಳ ನೀಡದಂತೆ ಹೊಸ ವಿಧೇಯಕವೊಂದನ್ನು ತರಲಾಗುತ್ತಿದ್ದು , ಅದು ಮುಂದಿನ ಅಧಿವೇಶನದಲ್ಲಿ ಜಾರಿಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications