ಒಂದೇ ಸೂರಿನಡಿ ಸಕಲ ಸೇವೆ ಇದು ಬಳ್ಳಾರಿಒನ್

ಇಡಿಸಿಎಸ್ ನಿರ್ದೇಶನಾಲಯ, ಇ ಆಡಳಿತ ಇಲಾಖೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿಂದು ಪಾಲಿಕೆಯ ಆವರಣದಲ್ಲಿ ಬಳ್ಳಾರಿ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಮತ್ತು ಖಾಸಗಿ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವಂತಹ 'ಬಳ್ಳಾರಿ ಒನ್' ಸಮಗ್ರ ನಾಗರಿಕ ಸೇವಾ ಕೇಂದ್ರವನ್ನು ಗ್ರಾಹಕರು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು. ಬಳ್ಳಾರಿಯ ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಗೆ ಉತ್ತಮವಾಗಿ ತುರ್ತು ಸೇವೆ ನೀಡುವ ಸಲುವಾಗಿ ಮಹಾನಗರ ಪಾಲಿಕೆ ಹಾಗು ಬುಡ ಕಚೇರಿಯಲ್ಲಿ ಬಳ್ಳಾರಿ ಒನ್' ಸೇವಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.
ಪ್ರಸ್ತುತ ಈ ಕೇಂದ್ರಗಳಲ್ಲಿ ವಿದ್ಯುತ್ ಬಿಲ್ , ಸೆಲ್ ಒನ್, ಏರ್ಟೆಲ್, ವೊಡಾಫೋನ್ ಮೊಬೈಲ್ ಬಿಲ್ ಹಾಗು ಪಾಸ್ಪೋರ್ಟ್ ಅರ್ಜಿಗಳನ್ನು ಮಾರಾಟ ಮಾಡಲಾಗುವುದು. ಈ ಎಲ್ಲಾ ಬಿಲ್ ಗಳನ್ನು ಇಲ್ಲಿ ಪಾವತಿ ಮಾಡಬಹುದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಅಲ್ಲದೇ ಹೆಚ್ಚು ಸೇವೆಗಳನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಬಿ. ಶಿವಪ್ಪ ಅವರು, ಈ ಯೋಜನೆಯು ಅತ್ಯುಪಯುಕ್ತವಾದುದು. ಬೆಂಗಳೂರು ಒನ್ ಅನ್ನು ಅಧ್ಯಯನ ಮಾಡಿ, ಅದೇ ಮಾದರಿಯಲ್ಲಿ ಸೇವೆಗಳನ್ನು ವಿಸ್ತರಿಸಲಾಗುವುದು. ಎಪಿಎಂಸಿ, ರೇಡಿಯೋ ಪಾರ್ಕ್ ಸೇರಿದಂತೆ ಇನ್ನೂ 3 ಕೇಂದ್ರಗಳನ್ನು ಪ್ರಾರಂಭಿಸಲು ಕ್ರಮಕೈಗೊಳ್ಳಲಾಗುವುದು. ಇದೊಂದು ರೀತಿ ಜನಸ್ನೇಹಿ ಕಾರ್ಯಕ್ರಮವಾಗಿದೆ ಎಂದು ಅವರು ತಿಳಿಸಿದರು.
ಅಧ್ಯಕ್ಷತೆವಹಿಸಿದ್ದ ಶಾಸಕ, ಕೆಎಂಎಫ್ ಅಧ್ಯಕ್ಷ ಜಿ. ಸೋಮಶೇಖರ ರೆಡ್ಡಿ ಅವರು ಮಾತನಾಡಿ, ಮಹಾನಗರ ಪಾಲಿಕೆಯ ನೀರಿನ ಬಿಲ್ಲು, ಮನೆಕಂದಾಯ, ಮರಣ- ಜನನ ಪ್ರಮಾಣ ಪತ್ರ ಸೇರಿಂದತೆ ಎಲ್ಲಾ ಸೇವೆಗಳನ್ನು ಈ ಕೇಂದ್ರಗಳಿಗೆ ಶೀಘ್ರವಾಗಿ ವಿಸ್ತರಿಸಲಾಗುವುದು. ಇದೊಂದು ಅತ್ಯುತ್ತಮವಾದ ಸೇವೆಯಾಗಿದ್ದು, ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಇ ಆಡಳಿತ ಇಲಾಖೆಯ ಕಾರ್ಯದರ್ಶಿ ವಿದ್ಯಾಶಂಕರ ಅವರು, ಈ ಸೇವೆಯನ್ನು 2005 ರಲ್ಲಿ ಬೆಂಗಳೂರಿನಲ್ಲಿ ಪ್ರಾರಂಭಿಸಲಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ 70 ಕೇಂದ್ರಗಳು 43 ಸೇವೆಗಳನ್ನು 24 ಗಂಟೆಗಳ ಕಾಲ ನಿರ್ವಹಿಸುತ್ತಿವೆ. 3 ಸಾವಿರ ಕೋಟಿ ರೂ. ವಹಿವಾಟನ್ನು ಹೊಂದಿದೆ ಎಂದರು.
ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಧಾರವಾಡ, ದಾವಣಗೆರೆ, ಗುಲ್ಬರ್ಗಾದಲ್ಲಿ ಈ ಸೇವೆಯನ್ನು ಪ್ರಾರಂಭಿಸಲಾಗಿದೆ. ಶೀಘ್ರವಾಗಿ ಬೆಳಗಾವಿಯಲ್ಲಿ ಪ್ರಾರಂಭಿಲಾಗುವುದು. ಬಳ್ಳಾರಿಯಲ್ಲಿ ಅಗತ್ಯವಿದ್ದರೆ ಇನ್ನೂ ಹೆಚ್ಚು ಕೇಂದ್ರಗಳನ್ನು ಹೆಚ್ಚು ಅವಧಿ ಹಾಗು ಸೇವೆಗಳಿಗೆ ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮೇಯರ್ ನೂರ್ ಜಹಾನ್ ಅಲ್ಲಬಕಾಷ್, ಉಪಮೇಯರ್ ತೂರ್ಪು ಯಲ್ಲಪ್ಪ, ಪಾಲಿಕೆಯ ಸದಸ್ಯರು, ವಿವಿಧ ಗಣ್ಯಮಾನ್ಯರು ಉಪಸ್ಥಿತರಿದ್ದರು.ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಬಿ. ತಿಮ್ಮಪ್ಪ ಸ್ವಾಗತಿಸಿದರು. ಇ ಆಡಳಿತದ ಕಾರ್ಯನಿರ್ವಾಹಕ ಡಾ. ಡಿ.ಎಸ್. ರವೀಂದ್ರನ್ ಅವರು ವಂದಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications