ಹಬ್ಬ ಸಂಭ್ರಮಕ್ಕೆ ಉಗ್ರರ ಭೀತಿಯ ಕರಿ ನೆರಳು

ಕೇರಳ ಸೇರಿದಂತೆ ಕರ್ನಾಟಕದಲ್ಲೂ ಸಂಭಾವ್ಯ ದಾಳಿ ಸಾಧ್ಯತೆ ಕುರಿತು ಗೃಹ ಸಚಿವಾಲಯ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಲಷ್ಕರ್ ಇ ತೋಯ್ಬಾ ಸೇರಿದಂತೆ ಪಾಕಿಸ್ತಾನದಪ್ರಮುಖ ಭಯೋತ್ಪಾದನಾ ಸಂಘಟನೆಗಳು ಭಾರತದ ಮೇಲೆ ದೃಷ್ಟಿ ಹರಿಸಿವೆ.
ಗೃಹ ಸಚಿವಾಲಯದ ಎಚ್ಚರಿಕೆಯನ್ವಯ, ಸಾರ್ವಜನಿಕ ಸ್ಥಳಗಳಲ್ಲಿ ತಪಾಸಣೆ, ಮಾರುಕಟ್ಟೆ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಪಾರ್ಕ್ಗಳು ಸೇರಿದಂತೆ ಜನನಿಬಿಡ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಬೇಕೆಂದು ಎಚ್ಚರಿಸಲಾಗಿದೆ.
ಸದ್ಯ ಆರಂಭವಾಗಿರುವ ರಂಜಾನ್ ಜತೆಗೆ ರಕ್ಷಾ ಬಂಧನ್, ಈದ್-ಉಲ್ ಫಿತರ್, ಓಣಂ ಹಾಗೂ ವರಮಹಾಲಕ್ಷ್ಮಿ ಹಬ್ಬದ ವೇಳೆ ಇರುವ ಜನರ ಸಂಭ್ರಮವನ್ನು ಹಿಂಸಾಚಾರದ ಮೂಲಕ ಬೆದರಿಸುವ ನಿಟ್ಟಿನಲ್ಲಿ ಭಯೋತ್ಪಾದನಾ ಶಕ್ತಿಗಳು ಸಂಚು ರೂಪಿಸಿವೆ. ಹೀಗಾಗಿ ಕೂಡಲೇ ಬಿಗಿ ಭದ್ರತೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೂ ಕಟ್ಟಪ್ಪಣೆ ವಿಧಿಸಿದೆ ಎಂದು ತಿಳಿದು ಬಂದಿದೆ.
ಮದನಿ ಬಂಧನ ಮತೀಯ ಗಲಭೆಗೆ ಆಹ್ವಾನ :ಬೆಂಗಳೂರು ಸರಣಿ ಸ್ಫೋಟ ಪ್ರಕರಣದ ಶಂಕಿತ ಆರೋಪಿ ಅಬ್ದುಲ್ ನಾಸೀರ್ ಮದನಿಯನ್ನು ಕೇರಳದಲ್ಲಿ ಬಂಧಿಸಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ.
ಈಗಾಗಲೇ ಮದನಿ ಬಂಧನ ಹಿನ್ನೆಲೆಯಲ್ಲೂ ಮತೀಯವಾದಿಗಳಿಂದ ದಾಳಿ ನಡೆಯುವ ಭೀತಿ ಎದುರಾಗಿರುವಾಗಲೇ ಕೂಡಲೇ ಹೆಚ್ಚುವರಿ ಪಡೆಯನ್ನು ಸೂಕ್ಷ್ಮ ಪ್ರದೇಶಗಳಿಗೆ ನಿಯೋಜಿಸುವಂತೆ ಕೇಂದ್ರ ಗೃಹ ಸಚಿವಾಲಯ ಕರ್ನಾಟಕ ದಿಲ್ಲಿ ಹಾಗೂ ಕೇರಳ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.
ಆ.20ರಂದು ವರಮಹಾಲಕ್ಷ್ಮಿ ಹಬ್ಬವಿದ್ದರೆ, ಆ.23ಕ್ಕೆ ದೇಶಾದ್ಯಂತ ಓಣಮ್ ಹಬ್ಬವಿದೆ. ಆ.24ರಂದು ರಕ್ಷಾಬಂಧನ್ ಹಾಗೂ ಸೆ.13ರಂದು ಇದ್ ಉಲ್ ಫಿತರ್ ಹಬ್ಬವಿರುವುದರಿಂದ ಈ ಸಂದರ್ಭದಲ್ಲಿ ಹಿಂಸಾಚಾರ ನಡೆಸಲು ಉಗ್ರರು ಸಂಚು ಹೂಡಿದ್ದಾರೆಂದು ಆತಂಕ ವ್ಯಕ್ತಪಡಿಸಲಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications