ಕೊಡಗಿನಲ್ಲಿ ಉಗ್ರಗಾಮಿ ಚಟುವಟಿಕೆ ಬಯಲು

ಈ ಸಂದರ್ಭ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದರೆ, ಬೆಂಗಳೂರು ಸರಣಿ ಸ್ಪೋಟ ಸಂಭವಿಸುತ್ತಿರಲಿಲ್ಲವೆನೋ. ಉಗ್ರ ನಜೀರ್ ಸೆರೆ ಸಿಕ್ಕಿ ಕೊಡಗಿನಲ್ಲಿ ಕಾಫಿತೋಟದ ಮಧ್ಯೆ ಕುಳಿತು ಬೆಂಗಳೂರು ಸರಣಿ ಸ್ಪೋಟದ ಸ್ಕೆಚ್ ತಯಾರಿಸಿದ್ದೆವು ಎಂದು ಬಾಯಿ ಬಿಡುವ ತನಕವೂ ಕೊಡಗು ಉಗ್ರಗಾಮಿಗಳ ಚಟುವಟಿಕೆಗೆ ತಾಣವಾಗಿತ್ತು ಎಂಬ ಅರಿವೇ ಇರಲಿಲ್ಲ.
ಆ ಬಳಿಕ ಎಚ್ಚೆತ್ತುಕೊಂಡ ಪೊಲೀಸರು ತನಿಖೆ ನಡೆಸಿದಾಗ ಸೋಮವಾರಪೇಟೆಯ ಹೊಸತೋಟದ ಲಕ್ಕೆರೆಯಲ್ಲಿ ನಿರ್ಮಿಸಿದ ಶೆಡ್, ಅಲ್ಲಿ ಸಿಕ್ಕ ಕೆಲವು ದಾಖಲಾತಿಗಳು ನಜೀರ್ ಅಲ್ಲಿ ಕೆಲ ಸಮಯಗಳ ಕಾಲ ವಾಸ್ತವ್ಯ ಹೂಡಿದ್ದನು ಎಂಬುವುದನ್ನು ನಿರೂಪಿಸಿತ್ತು. ಅಲ್ಲದೆ ಆ ಸಂದರ್ಭ ಸ್ಥಳೀಯರನ್ನು ವಿಚಾರಿಸಿದಾಗ ವ್ಯಕ್ತಿಯೊಬ್ಬ ಕಾರಿನಲ್ಲಿ ಬಂದುಹೋಗುತ್ತಿದ್ದ ವಿಚಾರವನ್ನು ತಿಳಿಸಿದ್ದರು. ಆದರೆ ಆ ವ್ಯಕ್ತಿ ಯಾರಾಗಿರಬಹುದೆಂದು ಪೊಲೀಸರು ತಲೆ ಕೆಡಿಸಿಕೊಂಡಿದ್ದರಲ್ಲದೆ, ಆ ನಿಟ್ಟಿನಲ್ಲಿ ತನಿಖೆ ಕೈಗೊಂಡಿದ್ದರು. ಆದರೆ ಆ ವ್ಯಕ್ತಿ ಬೇರೆ ಯಾರೂ ಅಲ್ಲ ಕೇರಳದ ಪಿಡಿಪಿ ಮುಖಂಡ ಅಬ್ದುಲ್ ನಾಸಿರ್ ಮದನಿ ಎಂಬುವುದು ಇದೀಗ ಬಹಿರಂಗಗೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಂಜೆ 5.30ರ ವೇಳೆಗೆ ಮದನಿಯನ್ನು ಕೊಡಗಿನ ಲಕ್ಕೆರೆಗೆ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಕರೆ ತಂದ ಕ್ರೈಂ ಬ್ರಾಂಚ್ ಪೊಲೀಸರು, ಉಗ್ರ ನಜೀರ್ ನಿರ್ಮಿಸಿಕೊಂಡಿದ್ದ ಶೆಡ್ ಬಳಿಯಲ್ಲಿಯೇ ಸುಮಾರು 45 ನಿಮಿಷಗಳ ಕಾಲ ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭ ಕೆಲವು ಅಗತ್ಯ ಮಾಹಿತಿಗಳನ್ನು ಆತ ಹೇಳಿದ್ದಾನೆ ಎನ್ನಲಾಗಿದೆ. 5.30 ರಿಂದ 6.15 ರವರೆಗೆ ಅಲ್ಲಿ ಸುತ್ತಾಡಿ ಮಾಹಿತಿ ಕಲೆಹಾಕಿದ್ದಾರೆ. ಆದರೆ ಇಲ್ಲಿ ಮಾಧ್ಯಮದವರನ್ನು ಹತ್ತಿರ ಬಿಡದಿದ್ದುದು ಸ್ಥಳೀಯ ಪತ್ರಕರ್ತರ ಅಸಮಾಧಾನಕ್ಕೂ ಕಾರಣವಾಯಿತು.
ಈ ಸಂದರ್ಭ ಮಾತನಾಡಿದ ಡಿಸಿಪಿ ಸಿದ್ದರಾಮಪ್ಪರವರು ವಿಚಾರಣೆಯನ್ನು ನಡೆಸುತ್ತಿದ್ದು ಸಹಕರಿಸುವಂತೆ ಕೋರಿದರಲ್ಲದೆ, ಮದನಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವುದಾಗಿ ಹೇಳಿದರು. ಆದರೆ ಮದನಿ ನನಗೆ ಪ್ರಾರ್ಥನೆ ಮಾಡಲು ಸಮಯವಾಗುತ್ತಿರುವುದರಿಂದ ಬೇಗ ತೆರಳುವಂತೆ ಪೊಲೀಸರನ್ನು ಒತ್ತಾಯಿಸುತ್ತಿದ್ದನು ಎಂದು ಹೇಳಲಾಗಿದ್ದು, ಅದರಂತೆ ಸುಂಟಿಕೊಪ್ಪದಲ್ಲಿ ಪ್ರಾರ್ಥನೆಗೆ ಅವಕಾಶ ನೀಡಿ ಬಳಿಕ ರಾತ್ರಿ ಬೆಂಗಳೂರಿಗೆ ಕರೆದೊಯ್ಯಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತನಿಖಾ ತಂಡದಲ್ಲಿ ಕ್ರೈಂ ಬ್ರಾಂಚ್ ಉಪ ಆಯುಕ್ತ ಓಂಕಾರಯ್ಯ, ಇನ್ಸ್ಪೆಕ್ಟರ್ ಬಿದ್ದಪ್ಪ ಮತ್ತಿತರ ಅಧಿಕಾರಿಗಳಿದ್ದರು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications