ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಂದೆರಡು ವಾರದಲ್ಲಿ ಸಂಪುಟ ಪುನಾರಚನೆ, ಸಿಎಂ ಸುಳಿವು

By Rajendra
|
Google Oneindia Kannada News

Yeddyurappa expands Karnataka cabinet
ಬೆಂಗಳೂರು, ಆ.22: ಸಚಿವ ಸಂಪುಟವನ್ನು ಪುನಾರಚಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಪಕ್ಷದ ಮುಂಖಡರ ಜೊತೆ ಸಮಾಲೋಚನೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಹಿರಿಯ ಮುಖಂಡರೊಂದಿಗೆ ಚರ್ಚಿಸಿ ಸೂಕ್ತಕಾಲದಲ್ಲಿ ಸೂಕ್ತ ಬದಲಾವಣೆ ಮಾಡಲಾಗುತ್ತದೆ. ಹದಿನೈದರಿಂದ ಇಪ್ಪತ್ತು ದಿನಗಳಲ್ಲಿ ಸಂಪುಟ ಪುನಾರಚನೆ ಕಾರ್ಯ ನಡೆಯಲಿದೆ ಎಂದಿದ್ದಾರೆ.

ಸುಮನಹಳ್ಳಿ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಭಿಕ್ಷುಕರ ಸಾವಿನ ಹಿನ್ನೆಲೆಯಲ್ಲಿ ಇಲಾಖೆಯಿಂದ ತಪ್ಪಾಗಿದೆ ಎಂಬ ಅಭಿಪ್ರಾಯ ಬಂದ ಕಾರಣ ಸಮಾಜ ಕಲ್ಯಾಣ ಸಚಿವ ಡಿ. ಸುಧಾಕರ್ ಅವರ ಖಾತೆ ಬದಲಾವಣೆ ಮಾಡಲಾಗಿದೆ ಎಂದರು. ಇಲಾಖೆಯಲ್ಲಿ ಕೆಲವರು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ದೂರನ್ನು ಮುಖ್ಯಮಂತ್ರಿಗಳು ನಿರಾಕರಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X