ಗುಲ್ಬರ್ಗಾ ದಕ್ಷಿಣದಿಂದ ನಮೋಶಿ ಸ್ಪರ್ಧೆ

ಗುಲ್ಬರ್ಗಾ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಹಾಗೂ ಚಂದ್ರಶೇಖರ್ ಪಾಟೀಲ್ ರೇವೊರು ಅವರ ಮಗ ದತ್ತಾತ್ರೇಯ ಪಾಟೀಲ್ ರೇವೂರು ಜೆಡಿಎಸ್ ನಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಮಾಜಿ ಮುಖ್ಯಮಂತ್ರಿ ಎನ್ ಧರ್ಮಸಿಂಗ್ ಅವರ ಮಗ ಡಾ ಅಜಯ್ ಸಿಂಗ್ ಅವರನ್ನು ಅಖಾಡಕ್ಕಿಳಿಸಲು ಕಾಂಗ್ರೆಸ್ ನಲ್ಲಿ ಚಿಂತನೆ ಆರಂಭವಾಗಿದ್ದು, ಸಂಜೆ ಹೊತ್ತಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಸಹ ಘೋಷಣೆ ಮಾಡುವ ಸಾಧ್ಯತೆ ಇದೆ.
ಮೂಲತಃ ಬಿಜೆಪಿ ಶಾಸಕರಾಗಿದ್ದ ಚಂದ್ರಶೇಖರ್ ಪಾಟೀಲ್ ರೇವೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಅವರ ಪತ್ನಿ ಅರುಣಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿತ್ತು. ಆದರೆ, ಅರುಣಾ ಅವರು ಸ್ಪರ್ಧಿಸಲು ನಿರಾಕರಿಸಿದ್ದರಿಂದ ಬಿಜೆಪಿ ಟಿಕೆಟ್ ನಮೋಶಿ ಅವರ ಪಾಲಾಗಿದೆ. ಆದರೆ, ರೇವೂರು ಅವರ ಮಗ ದತ್ತಾತ್ತೇಯ ಪಾಟೀಲ್ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಮುಖಂಡರು ನಿರಾಕರಿಸಿದ್ದರಿಂದ ದತ್ತಾತ್ರೇಯ ಜೆಡಿಎಸ್ ನಿಂದ ಸ್ಪರ್ಧಿಸಲಿದ್ದಾರೆ.
ಕಡೂರು ಶಾಸಕರಾಗಿದ್ದ ಕೃಷ್ಣಮೂರ್ತಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಜೆಡಿಎಸ್ ವಕ್ತಾರ ವೈಎಸ್ ವಿ ದತ್ತಾ ಜೆಡಿಎಸ್ ನಿಂದ ಸ್ಪರ್ಧಿಸಲಿದ್ದಾರೆ. ಕಳೆದ ಬಿಜೆಪಿಯಿಂದ ಸ್ಪರ್ಧಿಸಿ ಸೋಲುಂಡಿದ್ದ ವಿಶ್ವನಾಥ ಅವರನ್ನೇ ಬಿಜೆಪಿ ಮತ್ತೆ ಕಣಕ್ಕಿಳಿಸಿದೆ. ಕಾಂಗ್ರೆಸ್ ನಿಂದ ಅಖಾಡಕ್ಕಿಳಿಯಲು ಮಾಜಿ ಶಾಸಕ ಕೆ ಬಿ ಮಲ್ಲಿಕಾರ್ಜುನ ತೀವ್ರ ಲಾಭಿ ಅರಂಭಿಸಿದ್ದಾರೆ. ಸೆಪ್ಟೆಂಬರ್ 13 ರಂದು ಮತದಾನ ನಡೆಯಲಿದೆ. ಸೆ. 16ಕ್ಕೆ ಫಲಿತಾಂಶ ಹೊರಬೀಳಲಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications