ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಾಮಕ್ಕೆ ಉತ್ತೇಜನ

ಆಕ್ಟೋಬರ್3ರಿಂದ 14ರವರೆಗೆ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ನ ಕ್ರೀಡಾಗ್ರಾಮದಲ್ಲಿ 150 ರಿಂದ 200 ಕಾಂಡೋಮ್ ಮಾರಾಟ ಯಂತ್ರ ಅಳವಡಿಸುವ ನ್ಯಾಕೋ(NACO) ಹೇಳಿಕೆಗೆ ಅವರು ಖೇದ ವ್ಯಕ್ತಪಡಿಸಿದ್ದಾರೆ. ಕ್ರೀಡಾಕೂಟದ ಹಿನ್ನೆಲೆಯಲ್ಲಿ ರಷ್ಯಾ ಮತ್ತು ಪಶ್ಚಿಮ ಯೂರೋಪ್ ರಾಷ್ಟ್ರಗಳಿಂದ ಭಾರೀ ಸಂಖ್ಯೆಯಲ್ಲಿ ಯುವತಿಯರು ದಿಲ್ಲಿಗೆ ಆಗಮಿಸುವ ಸಾಧ್ಯತೆ ಇದೆ.
ಇದಕ್ಕಾಗಿಯೇ ಪ್ರಾತಿನಿಧಿಕ ಸಂಸ್ಥೆಗಳು ತಯಾರಿ ನಡೆಸಿವೆ ಎಂಬ ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ಅಯ್ಯರ್ ಟೀಕಾ ಪ್ರಹಾರ ನಡೆಸಿದ್ದರು. ಅಯ್ಯರ್ ಅವರ ವಾದವನ್ನು ರಾಮಾಜೋಯಿಸ್ ಸಮರ್ಥಿಸಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ಆಯೋಜಕ ಸಮಿತಿ ಅಧ್ಯಕ್ಷ ಸುರೇಶ್ ಕಲ್ಮಾಡಿ ಈ ಕ್ರೀಡಾಕೂಟದ ಮೂಲಕ ಭಾರತೀಯ ಪುರಾತನ ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿ ಹಿಡಿಯುವುದಾಗಿ ಹೇಳುತ್ತಾರೆ.
ಅನೈತಿಕ ಚಟೂವಟಿಕೆಗೆ ಆಸ್ಪದ: ಆದರೆ ಗೇಮ್ಸ್ ಹೆಸರಿನಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ ಮತ್ತು ಲೈಂಗಿಕ ಚಟುವಟಿಕೆಗಳು ಪರಮ ಪಾತಕ ಕೃತ್ಯ. ಸುಮಾರು 200 ವೆಂಡಿಂಗ್ ಮೆಷಿನ್ ಗಳಿಂದ ಅಂದಾಜು ದಿನವೊಂದಕ್ಕೆ 3 ರಿಂದ 3300ಕಾಂಡೋಮ್ ಪ್ಯಾಕ್ಗಳು ಬಳಕೆಯಾಗುತ್ತವೆ ಎಂಬುದಾದರೆ, ಪ್ರತಿ ನಿತ್ಯ ಸುಮಾರು ಒಂದು ಲಕ್ಷ ಕಾಂಡೋಮ್ಗಳು ಬಳಸಲ್ಪಟ್ಟಂತಾಯಿತು.
ಹೀಗಾದರೆ ಕ್ರೀಡಾಪಟುಗಳಿಂದ ಬೇರೇನನ್ನು ನಿರೀಕ್ಷಿಸಲು ಸಾಧ್ಯ. ಕ್ರೀಡಾಗ್ರಾಮದಲ್ಲಿ ಕಾಂಡೋಮ್ ಯಂತ್ರ ಅಳವಡಿಕೆಯಿಂದ ಬೇರೊಂದು ಸಂಪ್ರದಾಯಕ್ಕೆ ನಾಂದಿ ಹಾಡಿದಂತಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವೆ ಕು.ಶೆಲ್ಜಾ ಅವರಿಗೆ ಅಯ್ಯರ್ ಬರೆದಿರುವ ಪತ್ರವನ್ನು ಉಲ್ಲೇಖಿಸಿರುವ ಜೋಯಿಸ್ ಅವರು, ವ್ಯಭಿಚಾರಕ್ಕೆ ಉತ್ತೇಜನ ಮತ್ತು ವ್ಯಾಪಕ ಭ್ರಷ್ಟಾಚಾರದಿಂದಾಗಿ ದೇಶದ ಪ್ರತಿಷ್ಠೆಗೆ ಧಕ್ಕೆಯಾಗಲಿದೆ ಹೀಗಾಗಿ ಕಾಮನ್ ವೆಲ್ತ್ ಗೇಮ್ಸ್
ವೇಳೆ ಇಂತಹ ಅನೈತಿಕ ಚಟುವಟಿಕೆಗಳಿಗೆ ಆಸ್ಪದ ನೀಡದಂತೆ ಕೇಂದ್ರದ ಪ್ರವಾಸೋದ್ಯಮ ಸಚಿವರನ್ನು ರಾಮಾಜೋಯಿಸ್ ಆಗ್ರಹಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications