ಚೆಸ್ ದೊರೆಗೆ ಹೈದಾರಾಬಾದ್ ನಲ್ಲಿ ಚೆಕ್ಮೇಟ್

ಅನೇಕ ಬಾರಿ ವಿಶ್ವಚೆಸ್ ಪ್ರಶಸ್ತಿ ಗೆಲ್ಲುವು ಮೂಲಕ ಭಾರತದ ಕೀರ್ತಿ ಪತಾಕೆ ಹಾರಿಸಿದ ಹಿರಿಯ ಆಟಗಾರನೊಬ್ಬನಿಗೆ ಕೇಂದ್ರ ಸರಕಾರ ನಡೆಸಿಕೊಂಡ ಪರಿ ಇದೆ. ವಿಶ್ವನಾಥನ್ ಆನಂದ್ ಭಾರತದಲ್ಲಿ ನೆಲೆಸುವುದಕ್ಕಿಂತ ಹೆಚ್ಚಾಗಿ ಸ್ಪೇನ್ ನಲ್ಲಿ ವಾಸಿಸುವುದು ಹೆಚ್ಚು. ಹಾಗಂತ ಅವರು ಅಲ್ಲಿನ ಸಿಟಿಜನ್ ಸಿಪ್ ಪಡೆದಿಲ್ಲ. ಹೀಗಿದ್ದಾಗೂ, ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಮಾತ್ರ ವಿಶ್ವನಾಥನ್ ಆನಂದ್ ಅವರು ಭಾರತದ ನಾಗರಿಕ ಅಲ್ಲ ಭಾವಿಸಿದ್ದೆ ವಿವಾದಕ್ಕೆ ಕಾರಣವಾಗಿದೆ.
ಹೈದರಾಬಾದ್ ವಿಶ್ವವಿದ್ಯಾಲಯವು ವಿಶ್ವನಾಥನ್ ಅನಂದ್ ಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ. ಹೀಗಾಗಿ, ಮಾನವ ಸಂಪನ್ಮೂಲ ಇಲಾಖೆ ಅನುಮತಿ ಪಡೆದುಕೊಳ್ಳಲು ಮುಂದಾದಾಗ ಮಾನವ ಸಂಪನ್ಮೂಲ ಇಲಾಖೆ ವಿಶ್ವನಾಥನ್ ಅನಂದ್ ಅವರು ಭಾರತೀಯ ಸಿಟಿಜನ್ ಸಿಪ್ ಹೊಂದಿಲ್ಲ. ಅವರು ಸ್ಪೇನ್ ನಲ್ಲಿ ನೆಲೆಸಿದ್ದಾರೆ ಎಂಬ ವಾದವನ್ನು ಮುಂದಿಟ್ಟಿದೆ. ಇದೇ ಕಾರಣದಿಂದ ವಿಶ್ವವಿದ್ಯಾಲಯದಲ್ಲಿ ನಡೆಯಬೇಕಿದ್ದ ಡಾಕ್ಟರೇಟ್ ಗೌರವದ ಕಾರ್ಯಕ್ರಮ ಮುಂದೂಡಲಾಗಿತ್ತು.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ವಿಶ್ವನಾಥನ್ ಆನಂದ್ ಅವರ ಪತ್ನಿ ಅರುಣಾ, ಸುಮಾರು 15 ವರ್ಷಗಳ ವಿಶ್ವನಾಥನ್ ಆನಂದ ಭಾರತಕ್ಕೆ ಸೇವೆ ಸಲ್ಲಿಸಿದ್ದಾರೆ. ಆದರೆ, ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಅವರಿಗೆ ಈ ರೀತಿಯ ಅಗೌರವ ತೋರಿಸಿರುವುದು ಅಘಾತ ಉಂಟು ಮಾಡಿದೆ ಎಂದು ನೊಂದು ನುಡಿದಿದ್ದಾರೆ. ಮಂಗಳವಾರ ರಾತ್ರಿ ಹೈದಾರಾಬಾದ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಶಿ ಅವರು ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಬೇಕಿತ್ತು. ಆದರೆ, ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಅನುಮಾನವಾಗಿದೆ.
ಕ್ಷಮಿಸಿ ಎಂದ ಸಿಬಲ್ : ವಿಶ್ವನಾಥನ್ ಆನಂದ್ ಭಾರತದ ಹೆಮ್ಮೆಯ ಆಟಗಾರ. ಸಿಟಿಜನ್ ಸಿಪ್ ಸಂಬಂಧಿಸಿದಂತೆ ಹುಟ್ಟಿರುವ ವಿವಾದ ಕಣ್ತಪ್ಪಿನಿಂದ ಆಗಿರುವ ಪ್ರಮಾದ. ನಮಗೂ ಕೂಡಾ ಈ ಬಗ್ಗೆ ತುಂಬಾ ನೋವಾಗಿದೆ. ಘಟನೆಯಿಂದ ಆನಂದ್ ಅವರಿಗೆ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ಕಪಿಲ್ ಸಿಬಲ್ ವಿವಾದಕ್ಕೆ ಮಂಗಳ ಹಾಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications