ನಕಲಿ ಮದ್ಯ ತಡೆಗೆ ಜನಜಾಗೃತಿ: ರೇಣುಕಾ

ಉತ್ತರ ಕನ್ನಡ ಜಿಲ್ಲೆಯ ಅಬಕಾರಿ ಇಲಾಖಾ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ಅವರು ತಿಳಿಸಿದರು. ನಕಲಿ ಹಾಗೂ ಕಳ್ಳಭಟ್ಟಿ ಮದ್ಯ ತಡೆಗೆ ಸಾರ್ವಜನಿಕರ ಸಹಾಯ-ಸಹಕಾರ ಅಗತ್ಯ. ಇದರ ತಡೆಗೆ ಪ್ರತಿ ಗ್ರಾಮದಲ್ಲ್ಲೂ ಹಾಗೂ ಗ್ರಾಮ ಪಂಚಾಯತನಲ್ಲೂ ಗ್ರಾಮಸಭೆ ಜರುಗಿಸಿ ಜಾಗೃತಿ ಮೂಡಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗೂ ತಾವು ಭೇಟಿ ನೀಡುತ್ತಿರುವುದಾಗಿ ಅವರು ತಿಳಿಸಿದರು. ಮದ್ಯ ಜಪ್ತಿ ಪ್ರಕರಣಗಳಲ್ಲಿ ವಶಪಡಸಿಕೊಂಡ ವಾಹನಗಳನ್ನು ಆರೋಪ ಸಾಬೀತಾದ ತಕ್ಷಣವೇ ಹರಾಜು ಮಾಡುವಂತೆ ಸೂಚಿಸಿದೆ. ಸರ್ಕಾರಕ್ಕೆ ಒಟ್ಟು 423 ಕೋಟಿ ರೂ. ಅಬಕಾರಿ ಬಾಕಿ ಬರಬೇಕಿದ್ದು ಅಗಸ್ಟ್ ಕೊನೆಯೊಳಗೆ ಬಾರದಿದ್ದಲ್ಲಿ ಗುತ್ತಿಗೆದಾರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದೆಂದು ಅವರು ತಿಳಿಸಿದರು.
ಕಳೆದ ವರ್ಷ ಅಬಕಾರಿ ಇಲಾಖೆಯಿಂದ ಒಟ್ಟು 6,700 ಕೋಟಿ ರೂ. ಆದಾಯ ಗುರಿ ನಿಗದಿಯಾಗಿತ್ತು. ಆದರೆ 7,500 ಕೋಟಿ ರೂ ಆದಾಯ ಬಂದಿತ್ತು. ಈ ಬಾರಿ 7,500 ಕೋಟಿ ರೂ. ನಿಗದಿ ಮಾಡಿದ್ದು 8,500 ಕೋಟಿ ರೂ. ಸಾಧಿಸುವ ನಿರೀಕ್ಷೆಯಿದೆ. ಕಳ್ಳ ಭಟ್ಟಿ ಹಾಗೂ ನಕಲಿ ಹಾಗೂ ಪರವಾನಗಿ ರಹಿತ (ಸೆಕೆಂಡ್) ಮದ್ಯ ತಡೆಯಿಂದಾಗಿ ಇಲಾಖೆಗೆ ಹೆಚ್ಚಿನ ಆದಾಯ ಬರುತ್ತಿದೆಯೆಂದರು.
ಸರಾಯಿ ನಿಷೇಧದಿಂದ ಆದಾಯ ಹೆಚ್ಚಳ: ಗೋವಾದಿಂದ ಬರುವ ಮದ್ಯವನ್ನು ಸಂಪೂರ್ಣವಾಗಿ ತಡೆಯುವಂತೆ ಹಾಗೂ ಗೋವಾ ಗಡಿಯ 12 ಸ್ಥಳಗಳಿಂದ ಸರಬರಾಜು ಆಗುತ್ತಿದೆಯೆನ್ನಲಾದ ಅಕ್ರಮ ಮದ್ಯ ತಡೆಗೆ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಸರಾಯಿ ನಿಷೇಧದಿಂದ ಸರಕಾರಕ್ಕೆ ಆದಾಯ ಹೆಚ್ಚಿದೆ. ಹಾಗೂ ಇದರಿಂದ ಉದ್ಯೋಗ ಕಳೆದುಕೊಂಡವರಿಗೆ ಸಮಾಜಕಲ್ಯಾಣ ಇಲಾಖೆಯಿಂದ ಯೋಜನೆಗಳನ್ನು ರೂಪಿಸಲಾಗಿದೆಯೆಂದರು.
ಗೋವಾದಲ್ಲಿ ಗೇರು ಹಣ್ಣಿನಿಂದ ರಸ ತೆಗೆದು ಹುರಾಕ್ ಹಾಗೂ ಫೆನ್ನಿ ತಯಾರಿಸುವಂತೆ ರಾಜ್ಯದಲ್ಲಿಯೂ ಈ ಕುರಿತು ಚರ್ಚಿಸಲಾಗುವುದೆಂದರು. ನಂತರ ಗೋವಾ ಗಡಿಯಲ್ಲಿರುವ ಅಬಕಾರಿ ತಪಾಸಣಾ ನಾಕಾಗೆ ಭೇಟಿ ನೀಡಿದ ಸಚಿವರು ಅಲ್ಲಿ ವಶಪಡಿಸಿಕೊಂಡು ಸಂಗ್ರಹಿಸಲಾಗಿದ್ದ ಅಕ್ರಮ ಮದ್ಯ(ಸುಮಾರು 4,100 ಲೀ)ವನ್ನು ನಾಶಪಡಿಸಿದರಲ್ಲದೇ ಬಿಗಿಯಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಅಬಕಾರಿ ಇಲಾಖೆ ಮಂಗಳೂರು ವಿಭಾಗದ ಸೋಮಯ್ಯ ಬಸವರಾಜ ಉಪಸ್ಥಿತರಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications