ಬೆಂಗಳೂರಿನಲ್ಲೊಂದು ವಿಶ್ವ ವ್ಯಾಪಾರ ಕೇಂದ್ರ

ಡಬ್ಲ್ಯೂಟಿಸಿ ಆರಂಭಕ್ಕೆ ಅಗತ್ಯವಾದ ಎಲ್ಲ ಪರವಾನಿಗಿಗಳನ್ನು ಪಡೆಯಲಾಗಿದೆ. ಈ ಕೇಂದ್ರದ ಮೂಲಕ ನಗರದ ವಹಿವಾಟುಗಳಿಗೆ ಅಂತಾರಾಷ್ಟ್ರೀಯ ಮಾನ್ಯತೆ ದೊರೆಯಲಿದೆ. ಅನೇಕ ವಿದೇಶಿ ಕಂಪನಿಗಳ ಜೊತೆಗೆ ಸ್ವದೇಶಿ ಕಂಪನಿಗಳು ಈ ತಾಣದಲ್ಲಿ ವಹಿವಾಟು ಆರಂಭಿಸಲು ಮಾತುಕತೆ ನಡೆಸಿವೆ ಎಂದು ಕೇಂದ್ರದ ಒಕ್ಕೂಟಗಳ ನಿರ್ದೇಶಕ ರಾಬರ್ಟ್ ಜೆ ಫುಹ್ ಹೇಳಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮದ ಬ್ರಿಗೇಡ್ ಸಮೂಹ ಕೇಂದ್ರಕ್ಕೆ ಬೇಕಾದ ಮೂಲಸೌಕರ್ಯ ಸೇವೆ ಒದಗಿಸುತ್ತದೆ. ಇಸ್ಕಾನ್ ಹಾಗೂ ಮೆಟ್ರೋ ನಡುವಣ 40 ಎಕರೆ ಜಾಗದಲ್ಲಿ 30 ಅಂತಸ್ತಿನ ಸುಸಜ್ಜಿತ ಕಟ್ಟಡವನ್ನು ನಿರ್ಮಿಸುತ್ತಿದೆ. 1,000 ಕೋಟಿ ರುಪಾಯಿಗಳ ಬಂಡವಾಳದೊಂದಿಗೆ 10 ಲಕ್ಷ ಚದರ ಅಡಿಯ ಕಟ್ಟಡ ನಿರ್ಮಾಣವಾಗುತ್ತಿದೆ. ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ಕಟ್ಟಡ ಸೇವೆಗೆ ಲಭ್ಯವಾಗಲಿದೆ ಎಂದು ಬ್ರಿಗೇಡ್ ಸಮೂಹದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕಎಂ ಆರ್ ಜೈಶಂಕರ್ ತಿಳಿಸಿದ್ದಾರೆ.
ಮೂರೂವರೆ ವರ್ಷಗಳ ಹಿಂದೆ ಕಟ್ಟಡ ನಿರ್ಮಾಣ ಆರಂಭಿಸಲಾಗಿದೆ. ರಾಜ್ಯ ಸರಕಾರದಿಂದ ಡಬ್ಲ್ಯೂಟಿಸಿಗೆ ಬೇಕಾಗಿರುವ ಎಲ್ಲ ಬಗೆಯ ಪರವಾನಿಗಿಯನ್ನು ಪಡೆದುಕೊಂಡಿದ್ದೇವೆ ಎಂದು ಜೈಶಂಕರ್ ವಿವರಿಸಿದ್ದಾರೆ.
ಏನಿದು ವಿಶ್ವ ವ್ಯಾಪಾರ ಕೇಂದ್ರ ? : ಸೆಪ್ಟೆಂಬರ್ 11, 2001 ಅಮೆರಿಕದ ವಿಶ್ವ ವ್ಯಾಪಾರ ಕೇಂದ್ರದ ಮೇಲೆ ಭಯೋತ್ಪಾದಕರ ದಾಳಿ ಎಂಬ ಸುದ್ದಿ ವಿಶ್ವದೆಲ್ಲೆಡೆ ಬಿತ್ತರವಾಗುತ್ತಿತ್ತು. ಅಲ್ಲಿಂದ ಅಮೆರಿಕದಲ್ಲಿರುವ ಏಳು ವಿಶ್ವ ವ್ಯಾಪಾರಿ ಕೇಂದ್ರಗಳು ಜನಪ್ರಿಯವಾದವು. ಇಂಥ ವ್ಯಾಪಾರ ಕೇಂದ್ರವನ್ನು ನಿರ್ವಹಿಸುತ್ತಿರುವುದು ವಿಶ್ವ ವ್ಯಾಪಾರ ಒಕ್ಕೂಟ. ಸುಮಾರು 91 ರಾಷ್ಟ್ರಗಳಲ್ಲಿ ಅಸ್ತಿತ್ವ ಹೊಂದಿರುವ ವಿಶ್ವ ವ್ಯಾಪಾರ ಕೇಂದ್ರ 316 ನಗರಗಳಲ್ಲಿ ಚಟುವಟಿಕೆ ನಡೆಸುತ್ತಿದೆ.
ಒಕ್ಕೂಟ 88 ರಾಷ್ಟ್ರಗಳಲ್ಲಿ, 287 ಅಂಗಸಂಸ್ಥೆಗಳನ್ನು ಹೊಂದಿವೆ. ಸುಮಾರು 7,50,000 ಕ್ಕೂ ಹೆಚ್ಚು ಕಂಪನಿಗಳ ಒಕ್ಕೂಟ ಅಧೀನದಲ್ಲಿ ವಹಿವಾಟು ನಡೆಸುತ್ತಿವೆ. ತನ್ನ ಸದಸ್ಯರಿಗೆ ವಿಶ್ವ ಮಟ್ಟದ ವಹಿವಾಟು ನೀಡುವುದು ಒಕ್ಕೂಟದ ಪ್ರಮುಖ ಧ್ಯೇಯ. ಈ ವ್ಯಾಪಾರಿ ತಾಣದಲ್ಲಿ ಮುಖ್ಯವಾಗಿ ಅಂತಾರಾಷ್ಟ್ರೀಯ ಕಂಪನಿಗಳು ಕಂಡುಬರುತ್ತಿವೆ. ನಾನಾ ದೇಶಗಳ ಕಂಪನಿಗಳು ಒಂದೇ ಸೂರಿನಡಿ ನೋಡಲು ಸಿಗುತ್ತವೆ. ಸದಸ್ಯರ ನಡುವೆ ಸಹಕಾರ ಮತ್ತು ಪ್ರೋತ್ಸಾಹ ನೀಡುವುದು ಮುಖ್ಯ ಉದ್ದೇಶ. 24 ಅಂತಾರಾಷ್ಟ್ರೀಯ ನಿರ್ದೇಶಕರ ಮಂಡಳಿಯೊಂದಿಗೆ ಒಕ್ಕೂಟ ಕಾರ್ಯನಿರ್ವಹಿಸುತ್ತಿದೆ ಎಂದು ಒಕ್ಕೂಟ ಮುಖ್ಯಸ್ಥ ರಾಬರ್ಟ್ ಹೇಳುತ್ತಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications