ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅದಿರು ರಫ್ತು ನಿಷೇಧ ಅಸಾಧ್ಯ : ಕೇಂದ್ರ

By Mrutyunjaya Kalmat
|
Google Oneindia Kannada News

Mining Area
ನವದೆಹಲಿ, ಆ. 27 : ಕಬ್ಬಿಣದ ಅದಿರು ರಫ್ತನ್ನು ನಿಷೇಧಿಸಬೇಕೆಂಬ ಬೇಡಿಕೆಯನ್ನು ಕೇಂದ್ರ ಸರಕಾರ ತಳ್ಳಿಹಾಕಿದೆ. ಆದರೆ, ಅಕ್ರಮ ಗಣಿಗಾರಿಕೆ ತಡೆಯಲು ಆಯಾ ರಾಜ್ಯ ಸರಕಾರಗಳು ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

ಅಕ್ರಮ ಗಣಿಗಾರಿಕೆ ತಡೆಯುವುದು ಮತ್ತು ಅಕ್ರಮ ಅದಿರು ನಿಲ್ಲಿಸಲು ರಾಜ್ಯ ಸರಕಾರಗಳಿಗೆ ಸಾಧ್ಯವಾಗಿಲ್ಲ ಎಂಬ ಕಾರಣಕ್ಕೆ ಕೇಂದ್ರ ಸರಕಾರ ಸಂಪೂರ್ಣವಾಗಿ ಕಬ್ಬಿಣದ ಅದಿರು ರಫ್ತಿನ ಮೇಲೆ ನಿಷೇಧ ಹೇರಲು ಸಾಧ್ಯವಿಲ್ಲ ಎಂದು ಕೇಂದ್ರ ಗಣಿ ಖಾತೆ ಸಚಿವ ಬಿ ಕೆ ಹಂಡಿಕ್ ಲೋಕಸಭೆಯಲ್ಲಿ ಹೇಳಿದ್ದಾರೆ.

ಕರ್ನಾಟಕ, ಆಂಧ್ರಪ್ರದೇಶ, ಒರಿಸ್ಸಾ ಹಾಗೂ ಜಾರ್ಖಂಡ್ ಗಳಲ್ಲಿ ಆಡಳಿತ ನಿರ್ವಹಣೆ ವೈಫಲ್ಯದಿಂದ ಆಯಾ ರಾಜ್ಯಗಳಲ್ಲಿ ಅಂಕೆ ಮೀರಿದ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಕಬ್ಬಿಣದ ಅದಿರು ರಫ್ತಿನ ಮೇಲೆ ನಿಷೇಧ ಹೇರುವ ಬದಲು ಕಬ್ಬಿಣದ ಅದಿರು ಅಕ್ರಮವಾಗಿ ಉತ್ಪಾದನೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದು ಹಂಡಿಕ್ ವಿವರಿಸಿದ್ದಾರೆ

ದೇಶದಲ್ಲಿಯೇ ಎರಡನೇ ಅತೀ ಹೆಚ್ಚು ಕಬ್ಬಿಣದ ಅದಿರು ಉತ್ಪಾದಿಸುವ ರಾಜ್ಯವಾದ ಕರ್ನಾಟಕದಲ್ಲಿ ಕಬ್ಬಿಣದ ಅದಿರು ರಫ್ತಿನ ಮೇಲೆ ನಿಷೇಧ ಹೇರಿಲ್ಲ. ಕಬ್ಬಿಣದ ಅದಿರಿನ ಸಾಗಾಟದ ಮೇಲೆ ನಿಷೇಧ ಹೇರಲಾಗಿದೆಯೇ ಹೊರತು ಅದಿರು ರಫ್ತಿನ ಮೇಲೆ ಅಲ್ಲ ಎಂದು ಸಚಿವರು ಲೋಕಸಭೆಗೆ ವಿವರಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X