ಆನಂದ್ ಅಸ್ನೋಟಿಕರ್ ರಾಜೀನಾಮೆಗೆ ಸಿಪಿಐ ಪಟ್ಟು

ರಾಜೀನಾಮೆಗೆ ಆಗ್ರಹಿಸಿರುವ ಸಿಪಿಐ(ಎಂ)ನ ರಾಜ್ಯ ಘಟಕದ ಕಾರ್ಯದರ್ಶಿ ಜಿ.ಎನ್. ನಾಗರಾಜ ಅವರು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 'ಆಪರೇಷನ್ ಕಮಲಕ್ಕೆ' ಪ್ರೋತ್ಸಾಹಿಸಿದ್ದೇ ಅಕ್ರಮ ಗಣಿಗಾರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ಹರಿಹಾಯ್ದರು.
ನೈತಿಕವಾಗಿ ಮತ್ತು ಚಾರಿತ್ರಿಕವಾಗಿ ಪರಿಶುದ್ಧರು ಎಂದು ಕರೆದುಕೊಳ್ಳುವ ಬಿಜೆಪಿ ಕಳಂಕಿತರನ್ನು ಸಚಿವ ಸಂಪುಟದಲ್ಲಿ ಉಳಿಸಿಕೊಳ್ಳುವುದಕ್ಕಿಂತ ವಜಾ ಮಾಡಿ ತಮ್ಮ ಶುದ್ಧತೆಯನ್ನು, ಪ್ರಾಮಾಣಿಕತೆಯನ್ನು ತೋರಬೇಕು. ಆದರೆ, ಬಿಜೆಪಿಯವರು ಪರರಿಂದ ಮಾತ್ರ ಪರಿಶುದ್ಧತೆ, ಪ್ರಾಮಾಣಿಕತೆ ನಿರೀಕ್ಷಿಸುವವರು ಆಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಕಬ್ಬಿಣದ ಅದಿರು ರಫ್ತು ನಿಷೇಧ ಕುರಿತು ರಾಜ್ಯ ಸರಕಾರ ಮೊಸಳೆಕಣ್ಣೀರು ಸುರಿಸುತ್ತಿದೆ. ರಫ್ತು ನಿಷೇಧಿಸಿದ್ದರೂ ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿದೆ. ಕಬ್ಬಿಣದ ಅದಿರಿನ ರಫ್ತು ನಿಂತಿಲ್ಲ ಎಂದು ಲೋಕಾಯುಕ್ತರೇ ಸ್ಪಷ್ಟಪಡಿಸಿದ್ದಾರೆ. ಆದರೂ, ಸರಕಾರ ಕಣ್ಣಿದ್ದೂ ಕುರುಡನಂತೆ ವರ್ತಿಸುತ್ತಿದೆ ಎಂದು ನಾಗರಾಜ್ ಕಂಡ ಕಾರಿದರು.
ಕಾಂಗ್ರೆಸ್ ಕೂಡ ಕಬ್ಬಿಣದ ಅದಿರು ರಫ್ತು ಕುರಿತು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ. ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆ ನಡೆಸುತ್ತದೆ, ಆದರೆ, ಕೇಂದ್ರದಲ್ಲಿ ಕಬ್ಬಿಣದ ಅದಿರು ರಫ್ತು ನಿಷೇಧ ಸಾಧ್ಯವೇ ಇಲ್ಲ ಎನ್ನುತ್ತಿದೆ. ಇದೆಂಥಾ ನೀತಿ ಎಂದು ಅವರು ಪ್ರಶ್ನಿಸಿದರು.
ಅಸ್ನೋಟಿಕರ್ ಪ್ರತಿಕ್ರಿಯೆ : ಸಿಪಿಐ ರಾಜೀನಾಮೆ ಆಗ್ರಹಕ್ಕೆ ರಾಯಚೂರಿನಲ್ಲಿ ಖಾರವಾಗಿ ಪ್ರತಿಕ್ರಿಯಿಸಿರುವ ಆನಂದ್ ಅಸ್ನೋಟಿಕರ್ ಅವರು. ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನನ್ನ ಕೆಲಸವನ್ನು ಅತ್ಯಂತ ಸಮರ್ಪಕವಾಗಿ ನಿಭಾಯಿಸಿದ್ದೇನೆ. ಇನ್ನೂ ಹೆಚ್ಚಿನ ಜವಾಬ್ದಾರಿ ಕೊಡುವ ಭರವಸೆಯನ್ನು ಯಡಿಯೂರಪ್ಪ ಅವರು ನೀಡಿದ್ದಾರೆ ಎಂದಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications