Get Updates
Get notified of breaking news, exclusive insights, and must-see stories!

ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ಕೇಳೇಕರ್ ನಿಧನ

Konkani writer Ravindra Kelekar passes away
ಪಣಜಿ, ಆ.28: ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ಹಾಗೂ ಹಿರಿಯ ಗಾಂಧಿವಾದಿ ರವೀಂದ್ರ ಕೇಳೇಕರ್(85) ಅವರು ಮಡಗಾಂವ್ ನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ವಿಧಿವಶರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಹುಭಾಷಾ ವಿಶಾರದರಾದ ಕೇಳೇಕರ್ ಅವರು ಇಂಗ್ಲಿಷ್, ಹಿಂದಿ, ಕೊಂಕಣಿ, ಮರಾಠಿ ಮತ್ತು ಗುಜರಾತಿ ಭಾಷೆಯಲ್ಲಿ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. 2007ನೇ ಸಾಲಿನ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದ ಅವರಿಗೆ ಜುಲೈ 31, 2010ರಲ್ಲಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರು ಪ್ರಶಸ್ತಿಯನ್ನು ಕಲಾ ಅಕಾಡೆಮಿಯಲ್ಲಿ ಪ್ರದಾನ ಮಾಡಿದ್ದರು.

ಗಾಂಧಿ ವಿಚಾರಧಾರೆಗಳಿಂದ ಪ್ರಭಾವಿತರಾಗಿದ್ದ ಕೇಳೇಕರ್ ಹೆಚ್ಚಾಗಿ ಗಾಂಧಿ ಬಗ್ಗೆಯೇ ಬರೆದಿದ್ದಾರೆ. ಕೊಂಕಣಿಗೆ ಅನುವಾದಿಸಿದ್ದ ಮಹಾಭಾರತ ಪುಸ್ತಕ ಸಾಹಿತ್ಯದ ಅತ್ಯ್ಯುತ್ತಮ ಕೃತಿಯಾಗಿದೆ. ಕೇಳೇಕರ್ ಅವರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಗೋವಾ ಮುಖ್ಯಮಂತ್ರಿ ದಿಗಂಬರ್ ಕಾಮತ್ ವಿಷಾದ ವ್ಯಕ್ತಪಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+