ಟೆಕ್ಕಿಯಿಂದಲೇ ಇನ್ನೊಬ್ಬ ಟೆಕ್ಕಿಗೆ ಮೋಸ

ನಗರದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಯಲ್ಲಿ ಪ್ರೊಜೆಕ್ಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಸುರೇಶ್ ಪಿ ಮೆನನ್ ತನ್ನ ಕೈಕೆಳಗೆ ಕೆಲಸ ಮಾಡುವ ಸೀನಿಯರ್ ಮ್ಯಾನೇಜರ್ ಕುಲ್ಮನ್ ಕುರಿಯನ್ ನಿಂದ ತೆಗೆದುಕೊಂಡಿದ್ದ 6 ಲಕ್ಷ ರುಪಾಯಿ ಸಾಲ ನೀಡಲು ಸತಾಯಿಸಿದ್ದಾನೆ. ಅಲ್ಲದೇ ಹಣಕ್ಕಾಗಿ ಪೀಡಿಸಿದರೆ ನಿನ್ನ ಹೆಸರಿನ ಮೇಲೆ ಪತ್ರ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ ಘಟನೆ ನಡೆದಿದೆ.
2006ರಲ್ಲಿ ಕುರಿಯನ್ ಕಂಪನಿಗೆ ಸೇರಿಕೊಂಡಿದ್ದಾನೆ. ಪ್ರೊಜೆಕ್ಟ್ ಮ್ಯಾನೇಜರ್ ಆಗಿರುವ ಸುರೇಶ್ ಪಿ ಮೆನನ್ ಅಮೆರಿಕಕ್ಕೆ ತೆರಳಬೇಕಾಗಿದೆ. ಹೀಗಾಗಿ ಕುರಿಯನ್ ನಿಂದ ಹಣ ಪಡೆದ ಮೆನನ್ ತಿಂಗಳೊಳಗೆ ಮರಳಿ ನೀಡುವುದಾಗಿ ಭರವಸೆ ನೀಡಿದ್ದ. ಕುರಿಯನ್ ನೀಡದ ಹಣವನ್ನು ಕೇಳಿದಾಗ ಸದ್ಯಕ್ಕೆ ಹಣ ಇಲ್ಲ, ಕೆಲ ತಿಂಗಳ ನಂತರ ನೀಡುವೆ ಎಂದು ಮೆನನ್ ಸಾಗಹಾಕಿದ್ದಾನೆ.
ಕೆಲ ತಿಂಗಳ ನಂತರ ಕುರಿಯನ್ ಹಣ ಕೇಳಿದ್ದಾನೆ. ಆದರೆ, ಮೆನನ್ ನನ್ನಲ್ಲಿ ಹಣವಿಲ್ಲ. ಹಣಕ್ಕಾಗಿ ಪೀಡಿಸಿದರೆ ನಿನ್ನ ಹೆಸರಿನಲ್ಲಿ ಪತ್ರ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಳ್ಳುವ ನಾಟಕವಾಡಿದ್ದಾನೆ. ಇದರಿಂದ ಬೇಸತ್ತ ಕುರಿಯನ್ ಕಂಪನಿಯ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾನೆ. ಆಡಳಿತ ಮಂಡಳಿಯ ಮಧ್ಯಸ್ಥಿಕೆಯಿಂದಾಗಿ ಕುರಿಯನ್ ಗೆ ಹಣ ನೀಡುವುದಾಗಿ ಹೇಳಿದ ಮೆನನ್ 7 ಲಕ್ಷ ರುಪಾಯಿ ಚೆಕ್ ನೀಡಿದ.
ಆದರೆ, ಚೆಕ್ ಬೌನ್ಸ್ ಆಗಿದ್ದು ಗೊತ್ತಾಗುತ್ತಿದ್ದತೆಂಯೇ ಕುರಿಯನ್ ಮತ್ತೊಮ್ಮೆ ಕಂಪನಿಯ ಆಡಳಿತ ಮಂಡಳಿಯ ಮೊರೆಗೆ ಹೋಗಿದ್ದಾನೆ. ಆದರೆ, ಅಲ್ಲಿ ಕುರಿಯನ್ ಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಪುಲಿಕೇಶಿ ನಗರ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಕುರಿಯನ್, ಮೆನನ್ ವಿರುದ್ಧ ವಂಚನೆಗೆ ಸಂಬಂಧಿಸಿದ ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ತನಿಖೆ ಆರಂಭಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications