ಮಾದಿಗರೆಲ್ಲಾ ಮಾಧ್ವರಾಗಬೇಕು : ಪೇಜಾವರ ಶ್ರೀ

ನಗರದ ಕೈಲಾಸಪುರದ 2ನೇ ಮುಖ್ಯರಸ್ತೆಯಲ್ಲಿ ಸೋಮವಾರ ಮಾತನಾಡುತ್ತಿದ್ದ ಅವರು ಹಿಂದುಗಳಾಗಿರುವ ದಲಿತರನ್ನು ಅಸ್ಪೃಶ್ಯರು ಎಂದು ಹೇಳುವುದೇ ತಪ್ಪು. ಈಗಲೂ ಎಷ್ಟೋ ಊರುಗಳಲ್ಲಿ ದೇವಸ್ಥಾನಗಳಿಗೆ, ಹೋಟೆಲ್ ಗಳಿಗೆ ದಲಿತರ ಪ್ರವೇಶ ನಿರಾಕರಿಸಲಾಗುತ್ತದೆ. ಇವೆಲ್ಲಾ ತಪ್ಪಿದಾಗ ಮಾತ್ರ ಸಮಾಜದ ಉದ್ಧಾರ ಸಾಧ್ಯ ಎಂದರು.
ನಾನು ಇಲ್ಲಿಗೆ ಪ್ರಚಾರಕ್ಕಾಗಿ ಬಂದಿಲ್ಲ. ನಾನು ರಾಜಕಾರಣಿಯೂ ಅಲ್ಲ. ನನಗೆ ವೋಟೂ ಬೇಕಾಗಿಲ್ಲ. ಇದು ಹೃದಯಾಂತರಾಳದ ಆಸೆ. ಹಿಂದೂ ಜನರಿಗೆ ಅನ್ಯಾಯವಾಗಬಾರದು ಎಂಬುದೇ ನನ್ನ ಮುಖ್ಯ ಧ್ಯೇಯ ಎಂದು ಶ್ರೀಗಳು ಹೇಳಿದರು. ಹರಿಯಾಣಾದಲ್ಲಿ ಗೋವುಗಳನ್ನು ಕೊಂದ ಮೂವರು ದಲಿತರನ್ನು ಕೊಲೆ ಮಾಡಲಾಗಿತ್ತು. ಈ ವಿಷಯ ತಿಳಿದ ನಂತರ ಅಲ್ಲಿಗೆ ಭೇಟಿ ನೀಡಿ ದಲಿತರ ಕುಟುಂಬಗಳಿಗೆ ಸಾಂತ್ವನ ಹೇಳಿ ಈ ಭಾಗದ ಜನರಿಗೆ ಉಪದೇಶ ಮಾಡಿ ಬಂದಿದ್ದೇನೆ.
ಅಲ್ಲದೇ ಹರಿಯಾಣದಲ್ಲೇ ದಲಿತರ ಮನೆಯ ನಾಯಿ ಬೊಗಳಿತು ಎಂಬ ಕಾರಣಕ್ಕೆ ಅ ಮನೆಗೆ ಬೆಂಕಿ ಕುಟುಂಬದವರನ್ನು ಸಜೀವ ದಹನ ಮಾಡಲಾಗಿದೆ ಎಂಬ ವರದಿ ಓದಿದ್ದೇನೆ. ಅಲ್ಲಿಗೂ ಕೂಡಾ ಭೇಟಿ ಕೊಡಲಿದ್ದೇನೆ. ಮುಂದಿನ ವಿಎಚ್ ಪಿ ಸಂತರ ಸಮಾವೇಶದಲ್ಲಿ ಅಸ್ಪೃಶ್ಯತೆ ಹೋಗಲಾಡಿಸುವ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಶ್ರೀಗಳು ಭರವಸೆ ನೀಡಿದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications