ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟಕ್ಕೆ ಹೊಸ ಮುಖಗಳು : ಈಶ್ವರಪ್ಪ

By Mrutyunjaya Kalmat
|
Google Oneindia Kannada News

KS Eshwarappa
ಬೆಂಗಳೂರು, ಸೆ. 1 : ಭಾರತೀಯ ಜನತಾ ಪಕ್ಷವನ್ನು ಸದೃಢವಾಗಿ ಸಂಘಟಿಸುವಂತಹ ವ್ಯಕ್ತಿಗಳಿಗೆ ಮುಖ್ಯವಾಗಿ ಯುವ ಮುಖಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗುವುದು ಎಂದು ಬಿಜೆಪಿ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ನಗರದ ರಾಜೇಂದ್ರ ಭವನದಲ್ಲಿ ಬಿಜೆಪಿ, ಎಸ್ಸಿ, ಎಸ್ಪಿ ಘಟಕದ ರಾಜ್ಯ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಪಕ್ಷವನ್ನು ಬೆಳೆಸುವಂತಹ ವ್ಯಕ್ತಿಗಳ ಅವಶ್ಯಕತೆ ಇರುವುದರಿಂದ ಮುಂದಿನ ಸಚಿವ ಸಂಪುಟ ರಚನೆಯಲ್ಲಿ ಹೊಸಬರಿಗೆ ಆಧ್ಯತೆ ಇದೆ ಎಂದರು.

ಸೆಪ್ಟೆಂಬರ್ 13ರಂದು ನಡೆಯುವ ಗುಲ್ಬರ್ಗಾ ಮತ್ತು ಕಡೂರು ಉಪ ಚುನಾವಣೆಯ ನಂತರ ಸಂಪುಟ ವಿಸ್ತರಣೆ ಮಾಡಲಾಗುವುದು. ಸಂಪುಟದಲ್ಲಿರುವ ಹಿರಿಯರನ್ನು ಪಕ್ಷದ ಸಂಘಟನೆಗೆ ತೆಗೆದುಕೊಂಡು ಕೆಲವು ಉತ್ಸಾಹಿ ಶಾಸಕರನ್ನು ಸಂಪುಟಕ್ಕೆ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಚರ್ಚೆ ಆರಂಭವಾಗಿದೆ ಎಂದು ಈಶ್ವರಪ್ಪ ವಿವರಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X