ಗಜರಾಜನಿಗೆ ಭಾರತದ ಪಾರಂಪರಿಕ ಪ್ರಾಣಿ ಸ್ಥಾನ

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ಪರಿಸರ ಸಚಿವ ಜೈರಾಮ್ ರಮೇಶ್ ಈ ವಿಷಯವನ್ನು ತಿಳಿಸಿದರು.
ದೇಶದ ಧರ್ಮ ಮತ್ತು ಸಂಸ್ಕೃತಿಯೊಂದಿಗೆ ನಿಕಟವಾಗಿ ಗುರುತಿಸಿಕೊಂಡಿರುವ ಆನೆಯ ರಕ್ಷಣೆ ಕ್ರಮವಾಗಿ ಅದನ್ನು ರಾಷ್ಟ್ರೀಯ ಪರಂಪರೆ ಪ್ರಾಣಿ ಎಂದು ಘೋಷಿಸಲಾಗುವುದೆಂದು ಸ್ಪಷ್ಟಪಡಿಸಿದರು. ರಕ್ಷಣೆಗೆ ಮಹತ್ವ ಆನೆಯು ಶತಮಾನಗಳಿಂದಲೂ ನಮ್ಮ ಪರಂಪರೆಯ
ಭಾಗವಾಗಿದೆ.
ಆದರೆ ಇತ್ತೀಚೆಗೆ ಅರಣ್ಯ ನಾಶ ಹಾಗೂ ದಂತಕಳ್ಳರ ಹಾವಳಿಯಿಂದಾಗಿ ಆನೆಗಳ ಸಂತತಿ ಅವನತಿಯತ್ತ ಸಾಗಿದೆ. ಹೀಗಾಗಿ ಅವಸಾನದ ಅಂಚಿ ನಲ್ಲಿರುವ ರಾಷ್ಟ್ರೀಯ ಪ್ರಾಣಿ ಹುಲಿಯ ರಕ್ಷಣೆಗೆ ನೀಡಿರುವಷ್ಟೇ ಮಹತ್ವವನ್ನು ನಾವು ಆನೆಯ ರಕ್ಷಣೆಗೂ ನೀಡುವ ಅಗತ್ಯವಿದೆ ಎಂದು ಅವರು ಹೇಳಿದರು.
ಸರಕಾರವು ಕಳೆದ ವರ್ಷದ ಅಕ್ಟೋಬರ್ನಲ್ಲಿ ಡಾಲ್ಫಿನ್ನ್ನು ರಾಷ್ಟ್ರೀಯ ಜಲಚರ ಪ್ರಾಣಿ ಎಂದು ಕೇಂದ್ರ ಸರಕಾರವು ಘೋಷಿಸಿತ್ತು. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾದರಿಯಲ್ಲಿ ರಾಷ್ಟ್ರೀಯ ಆನೆಗಳ ಸಂರಕ್ಷಣಾ ಪ್ರಾಧಿಕಾರವನ್ನು ಸ್ಥಾಪಿಸಲು ವನ್ಯಜೀವಿ(ರಕ್ಷಣೆ) ಕಾಯ್ದೆಗೆ ತಿದ್ದುಪಡಿ ತರಲಾಗುವುದೆಂದೂ ರಮೇಶ್ ತಿಳಿಸಿದರು.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ತಿದ್ದುಪಡಿ ಯನ್ನು ಮಂಡಿಸಲಾಗುವುದು ಎಂದು ಹೇಳಿದ ಅವರು, ದೇಶ ದಲ್ಲೀಗ ಕೇವಲ 1141 ಹುಲಿಗಳಿವೆ. ಆನೆ ಸಂತತಿಯೂ ಅಂತಹ ಸ್ಥಿತಿ ತಲುಪುವ ಮೊದಲೇ ಅವುಗಳ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಒತ್ತಿ ನುಡಿದರು.
ಪರಿಸರ ಸಚಿವಾಲಯವು ರಚಿಸಿದ ಆನೆ ಕಾರ್ಯ ಪಡೆ(Elephant Task Force)ಯು ಮಂಗಳವಾರ ತನ್ನ ವರದಿಯನ್ನು ಸಚಿವರಿಗೆ ಸಲ್ಲಿಸಿದ್ದು, ಹೊಸ ಅಭಯಾರಣ್ಯಗಳನ್ನು ಸೃಷ್ಟಿಸುವ, ಕಳ್ಳಸಾಗಾಣಿಕೆಯನ್ನು ತಡೆಯುವ ಮತ್ತು ಅರಣ್ಯ ಪ್ರದೇಶಗಳಲ್ಲಿ ಆನೆಗಳು ಚಲಿಸುವ ಮಾರ್ಗದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಿರ್ಬಂಧಿಸುವ ಮೂಲಕ ಭಾರತವು ತನ್ನ ಆನೆ ಸಂತತಿಯನ್ನು ರಕ್ಷಿಸಬೇಕಾಗಿದೆ ಎಂದು ಬೊಟ್ಟು ಮಾಡಿದೆ.
ಮೃಗಾಲಯಗಳು ಮತ್ತು ದೇವಸ್ಥಾನಗಳಲ್ಲಿಯ 3,500 ಸಾಕುಆನೆಗಳು ಸೇರಿದಂತೆ ದೇಶದಲ್ಲಿಂದು 25,000ಕ್ಕೂ ಅಧಿಕ ಆನೆಗಳಿವೆ ಎಂದು ವರದಿ ಹೇಳಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications