ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿಗೆ ಭರದ ಸಿದ್ದತೆ

ಇಂದು ರಾತ್ರಿ 10 ಗಂಟೆಗೆ ಅಲಂಕಾರ ಮತ್ತು ಮಹಾಪೂಜೆಯ ಮೂಲಕ ಕಾರ್ಯಕ್ರಮ ಆರಂಭವಾಗಲಿದೆ. ಶ್ರೀಕೃಷ್ಣನ ವಿಗ್ರಹಕ್ಕೆ ತುಳಸಿ ನೀರು ಮತ್ತು ಹಾಲಿನ ಮೂಲಕ ಅರ್ಘ್ಯ ಬಿಟ್ಟು, ನಂತರ ತುಳಸಿ ಕಟ್ಟೆಯಲ್ಲಿ ಕೃಷ್ಣನ ವಿಗ್ರಹಕ್ಕೆ ಹಾಲಿನಿಂದ ಅರ್ಘ್ಯ ಬಿಡುವುದು ವಾಡಿಕೆ. ಅಷ್ಟಮಿಯ ದಿನವಾದರೂ ಇಂದು ಉಪವಾಸ. ಲೀಲೋತ್ಸವದ ದಿನದಂದು (ಸೆ. 2) ರಥಬೀದಿಯಲ್ಲಿ ರಥೋತ್ಸವ ನಡೆಯಲಿದೆ. ನಂತರ ಅನ್ನ ಬ್ರಹ್ಮ ಕ್ಷೇತ್ರವೆಂದೇ ಪ್ರಸಿದ್ದವಾದ ಉಡುಪಿಯಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಪರ್ಯಾಯ ಮಠ ಈ ಬಾರಿ ಬರುವ ಎಲ್ಲಾ ಭಕ್ತಾದಿಗಳಿಗೆ ಲಡ್ಡು ಮತ್ತು ಚಕ್ಕುಲಿ ಪ್ರಸಾದ ನೀಡಲಾಗುವುದಾಗಿ ಪ್ರಕಟಿಸಿದೆ. ಸುಮಾರು ಎರಡು ಲಕ್ಷ ಲಡ್ಡು ಮತ್ತು ಚಕ್ಕುಲಿಯನ್ನು ಈಗಾಗಲೇ ತಯಾರಿಸಲಾಗಿದೆ. ಅಲ್ಲದೆ ಉತ್ಸವದ ಪ್ರಮುಖ ಆಕರ್ಷಣೆಯಾದ ಹುಲಿವೇಷ, ಭೂತಕೋಲ, ಡೊಳ್ಳು ಕುಣಿತ, ವೀರಗಾಸೆ, ಮರಕಾಲು ವೇಷ, ಯಕ್ಷಗಾನ ಮುಂತಾದ ಜಾನಪದ ನೃತ್ಯಗಳಲ್ಲಿ ಭಾಗವಹಿಸುವ ಕಲಾವಿದರಿಗೆ ಸಂಭಾವನೆಯಾಗಿ ಎಂಟು ಲಕ್ಷ ಮೀಸಲಿಡಲಾಗಿದೆ. ಇಂದು ಅಹೋರಾತ್ರಿ ಖ್ಯಾತ ಡ್ರಂ ಕಲಾವಿದ ಶಿವಮಣಿ ತಂಡದಿಂದ ಕಾರ್ಯಕ್ರಮ ನಡೆಯಲಿದೆಯೆಂದು ಮಠ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಉಡುಪಿ ಜಿಲ್ಲಾ ಪೋಲಿಸ್ ಭಾರಿ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಇಂದು ರಾತ್ರಿ ನಡೆಯುವ ಮಹಾಪೂಜೆ, ಅರ್ಘ್ಯಪ್ರದಾನ ಕಾರ್ಯಕ್ರಮ ಮತ್ತು ನಾಳೆ ನಡೆಯಲಿರುವ ವಿಟ್ಲಪಿಂಡಿ ಉತ್ಸವವನ್ನು ಈ ಟಿವಿ ಕನ್ನಡ ಚಾನಲ್ ನೇರ ಪ್ರಸಾರ ಮಾಡಲಿದೆ.
ಗ್ಯಾಲರಿ: ಯಶೋಧೆ ಕಂದ ಶ್ರೀಕೃಷ್ಣನ ವಿವಿಧ ರೂಪಗಳು
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications