ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿಗೆ ಭರದ ಸಿದ್ದತೆ

ಇಂದು ರಾತ್ರಿ 10 ಗಂಟೆಗೆ ಅಲಂಕಾರ ಮತ್ತು ಮಹಾಪೂಜೆಯ ಮೂಲಕ ಕಾರ್ಯಕ್ರಮ ಆರಂಭವಾಗಲಿದೆ. ಶ್ರೀಕೃಷ್ಣನ ವಿಗ್ರಹಕ್ಕೆ ತುಳಸಿ ನೀರು ಮತ್ತು ಹಾಲಿನ ಮೂಲಕ ಅರ್ಘ್ಯ ಬಿಟ್ಟು, ನಂತರ ತುಳಸಿ ಕಟ್ಟೆಯಲ್ಲಿ ಕೃಷ್ಣನ ವಿಗ್ರಹಕ್ಕೆ ಹಾಲಿನಿಂದ ಅರ್ಘ್ಯ ಬಿಡುವುದು ವಾಡಿಕೆ. ಅಷ್ಟಮಿಯ ದಿನವಾದರೂ ಇಂದು ಉಪವಾಸ. ಲೀಲೋತ್ಸವದ ದಿನದಂದು (ಸೆ. 2) ರಥಬೀದಿಯಲ್ಲಿ ರಥೋತ್ಸವ ನಡೆಯಲಿದೆ. ನಂತರ ಅನ್ನ ಬ್ರಹ್ಮ ಕ್ಷೇತ್ರವೆಂದೇ ಪ್ರಸಿದ್ದವಾದ ಉಡುಪಿಯಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಪರ್ಯಾಯ ಮಠ ಈ ಬಾರಿ ಬರುವ ಎಲ್ಲಾ ಭಕ್ತಾದಿಗಳಿಗೆ ಲಡ್ಡು ಮತ್ತು ಚಕ್ಕುಲಿ ಪ್ರಸಾದ ನೀಡಲಾಗುವುದಾಗಿ ಪ್ರಕಟಿಸಿದೆ. ಸುಮಾರು ಎರಡು ಲಕ್ಷ ಲಡ್ಡು ಮತ್ತು ಚಕ್ಕುಲಿಯನ್ನು ಈಗಾಗಲೇ ತಯಾರಿಸಲಾಗಿದೆ. ಅಲ್ಲದೆ ಉತ್ಸವದ ಪ್ರಮುಖ ಆಕರ್ಷಣೆಯಾದ ಹುಲಿವೇಷ, ಭೂತಕೋಲ, ಡೊಳ್ಳು ಕುಣಿತ, ವೀರಗಾಸೆ, ಮರಕಾಲು ವೇಷ, ಯಕ್ಷಗಾನ ಮುಂತಾದ ಜಾನಪದ ನೃತ್ಯಗಳಲ್ಲಿ ಭಾಗವಹಿಸುವ ಕಲಾವಿದರಿಗೆ ಸಂಭಾವನೆಯಾಗಿ ಎಂಟು ಲಕ್ಷ ಮೀಸಲಿಡಲಾಗಿದೆ. ಇಂದು ಅಹೋರಾತ್ರಿ ಖ್ಯಾತ ಡ್ರಂ ಕಲಾವಿದ ಶಿವಮಣಿ ತಂಡದಿಂದ ಕಾರ್ಯಕ್ರಮ ನಡೆಯಲಿದೆಯೆಂದು ಮಠ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಉಡುಪಿ ಜಿಲ್ಲಾ ಪೋಲಿಸ್ ಭಾರಿ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಇಂದು ರಾತ್ರಿ ನಡೆಯುವ ಮಹಾಪೂಜೆ, ಅರ್ಘ್ಯಪ್ರದಾನ ಕಾರ್ಯಕ್ರಮ ಮತ್ತು ನಾಳೆ ನಡೆಯಲಿರುವ ವಿಟ್ಲಪಿಂಡಿ ಉತ್ಸವವನ್ನು ಈ ಟಿವಿ ಕನ್ನಡ ಚಾನಲ್ ನೇರ ಪ್ರಸಾರ ಮಾಡಲಿದೆ.
ಗ್ಯಾಲರಿ: ಯಶೋಧೆ ಕಂದ ಶ್ರೀಕೃಷ್ಣನ ವಿವಿಧ ರೂಪಗಳು
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications