ರಾಜ್ಯದಲ್ಲಿ ಕಾಮನ್ ವೆಲ್ತ್ ಕ್ವಿನ್ಸ್ ಬ್ಯಾಟನ್ ರಿಲೇ

ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಬಳಿಯಿರುವ ಕೆಕ್ಕನಹಳ್ಳಿ ಚೆಕ್ಪೋಸ್ಟ್ನಲ್ಲಿ ಕ್ವಿನ್ಸ್ ಬ್ಯಾಟನ್ ರಿಲೇಯನ್ನು ನೀಲಗಿರಿ ಜಿಲ್ಲೆ ಯ ಜಿಲ್ಲಾಧಿಕಾರಿ ಅರ್ಚನಾ ಪಟ್ನಾಯಕ್ ಅವರಿಂದ ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷ ಕೆ. ಗೋವಿಂದರಾಜು ಸ್ವೀಕರಿಸಿದರು.
ನಂತರ ಅವರು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಚಿವ ಗೂಳೀಹಟ್ಟಿ ಶೇಖರ್ ಅವರಿಗೆ ಹಸ್ತಾಂತರಿಸಿದರು. ರಿಲೇ ಗಡಿಭಾಗಕ್ಕೆ ಪ್ರವೇಶಿದಾಗ ಪೂರ್ಣ ಕುಂಭ ಹಾಗೂ ಶಾಲಾ ಮಕ್ಕಳ ಸ್ವಾಗತದೊಂದಿಗೆ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.
ರಿಲೇ ಗಡಿ ಪ್ರವೇಶಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಜವಳಿ ಮತ್ತು ಕ್ರೀಡಾ ಸಚಿವ ಗೂಳೀಹಟ್ಟಿ ಶೇಖರ್, ಸೆ. 1 ರಿಂದ 7 ರವರೆಗೆ ಕ್ವಿನ್ಸ್ ಬ್ಯಾಟನ್ ರಿಲೇ ರಾಜ್ಯದಲ್ಲಿ ಸಂಚರಿಸಲಿದೆ ಎಂದರು. ರಿಲೇ ಸೆ. 2 ರಂದು ಬೆಂಗಳೂರು ತಲುಪಲಿದೆ.
ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರು ಹಾಗೂ ರಾಜ್ಯದ ಕ್ರೀಡಾ ಪಟುಗಳು ರಿಲೇಯನ್ನು ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ. ಇದಕ್ಕಾಗಿ ಸಿದ್ದತೆ ಮಾಡಲಾಗಿದೆ. ಅಂದು ಸಂಜೆ ಕಂಠೀರವ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ರಾಜ್ಯದಲ್ಲಿ 7 ದಿನ ರಿಲೇ ಸಂಚರಿಸಲಿದ್ದು, ಇದರ ಅಂಗವಾಗಿ ಸರ್ಕಾರ ವಿವಿಧ ಕಾರ್ಯಕ್ರಮ ನಡೆಸಲು 35 ಲಕ್ಷ ರೂ. ವೆಚ್ಚ ಮಾಡುತ್ತ್ತಿದೆ. ಸೆ. 7 ರಂದು ಕಾರವಾರದ ಮೂಲಕ ಗೋವಾ ರಾಜ್ಯಕ್ಕೆ ಬೀಳ್ಕೊಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎಂ. ಮುನಿರಾಜು, ಜಿಲ್ಲಾಧಿಕಾರಿ ಚಕ್ರವರ್ತಿ ಮೋಹನ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿ ಪೆರುಮ್ಮಾಳ್, ನಿರ್ದೇಶಕ ಶಿವನಂಜಯ್ಯ ಅಪರ ಜಿಲ್ಲಾಧಿಕಾರಿ ನಾಗರಾಜು, ಗುಂಡ್ಲುಪೇಟೆ ತಾ. ಪಂ. ಅಧ್ಯಕ್ಷ ಜಯರಾಮು, ಉಪ ವಿಭಾಗಾಧಿಕಾರಿ ಪಿ. ಯೋಗೀಶ್, ಜಿ. ಪಂ. ಸಿಇಓ. ಕೆ. ಸುಂದರನಾಯಕ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್, ಎಎಸ್ಪಿ ಫಣೀಂದ್ರಸಿಂಗ್, ಡಿವೈಎಸ್ಪಿ ಬಸವರಾಜು ಸೇರಿದಂತೆ ಇತರ ಗಣ್ಯರು ಕ್ವಿನ್ಸ್ ಬ್ಯಾಟನ್ ತಂಡವನ್ನು ಸ್ವಾಗತಿಸಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications