15 ಗಣಿಗಳಿಗೆ ಪರವಾನಿಗೆ : ಕಾಂಗ್ರೆಸ್ ಆರೋಪ

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿ ಎಸ್ ಉಗ್ರಪ್ಪ, ಕೆ ಸಿ ಕೊಂಡಯ್ಯ, ಗಣಿಗಾರಿಕೆಗೆ ಸರಕಾರ ನೀಡಿರುವ ಅನುಮತಿಯ ದಾಖಲೆಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ನೀಡಿದರು. 2008ರ ಜೂನ್ 13ರಿಂದ 2009ರ ನವೆಂಬರ್ 6ರ ಅವಧಿಯಲ್ಲಿ 15 ಕಂಪನಿಗಳಿಗೆ ಗಣಿಗಾರಿಕೆ ನಡೆಸಲು ಭೂಮಿ ಗುತ್ತಿಗೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.
ಸಿಎಂ ಕುಟುಂಬ ಮೈತ್ರಾ ಅಸೋಸಿಯೇಟ್ಸ್ ಹೆಸರಿನಲ್ಲಿ ಶಿವಮೂಗ್ಗದಲ್ಲಿ ನಿರ್ಮಿಸುತ್ತಿರುವ ಇಂಜಿನಿಯರಿಂಗ್ ಕಾಲೇಜು ಹಾಗೂ ಪಂಚತಾರಾ ಹೋಟೆಲ್ ಗಳಿಗೆ ಗಣಿ ಹಫ್ತಾದ ಕೋಟ್ಯಂತರ ರುಪಾಯಿ ಹಣ ಬಳಸುತ್ತಿದೆ. ಈ ಕಾಮಗಾರಿಗಳನ್ನು ಸಿಎಂ ಕುಟುಂಬ ನಿರ್ವಹಿಸುತ್ತಿದೆ. ಹಫ್ತಾದಲ್ಲಿ ಸುಷ್ಮಾ ಸ್ವರಾಜ್, ವೆಂಕಯ್ಯ ನಾಯ್ಡು ಮತ್ತು ಸಿಎಂಗೆ ಸಮಪಾಲು ಸಿಗುತ್ತಿದೆ. ಈ ಎಲ್ಲ ಅಕ್ರಮ ಬಯಲಿಗೆ ಬರುತ್ತದೆ ಎಂಬ ಕಾರಣದಿಂದ ಸಿಬಿಐ ತನಿಖೆಯಿಂದ ಹಿಂದೆ ಸರಿದಿದ್ದಾರೆ ಎಂದು ಉಗ್ರಪ್ಪ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ನಂತರ ಒಂದೇ ಒಂದು ಗಣಿ ಪರವಾನಿಗೆ ನೀಡಿಲ್ಲ. ಒಂದು ವೇಳೆ ನೀಡಿರುವುದನ್ನು ತೋರಿಸಿದರೆ ರಾಜೀನಾಮೆ ನೀಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ದಾಖಲೆಗಳನ್ನು ಒದಗಿಸಿದ್ದೇವೆ. ಈಗ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವರೇ? ಎಂದು ಪ್ರಶ್ನಿಸಿದರು.
ಅಕ್ರಮ ಗಣಿಗಾರಿಕೆಯ ಆರೋಪ ಎದುರಿಸುತ್ತಿರುವ ಸಚಿವ ಜನಾರ್ದನ ರೆಡ್ಡಿಯವರ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳ ಸಭೆ ನಡೆಸಿರುವುದು ಸಂಪೂರ್ಣ ನಾಟಕ. ಅಕ್ರಮ ಗಣಿಗಾರಿಕೆಯ ಹಣ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ಮುಖಂಡರಿಗೂ ಸಂದಾಯವಾಗುತ್ತಿದೆ. ಹೀಗಾಗಿ ರಾಜ್ಯ ಸರಕಾರ ಅಕ್ರಮ ಗಣಗಾರಿಕೆಗೆ ಬೆಂಬಲವಾಗಿ ನಿಂತಿದೆ ಎಂದು ಉಗ್ರಪ್ಪ ಕಿಡಿಕಾರಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications