'ಕೈ' ಬೆಚ್ಚಗೆ ಮಾಡಿದರೆ ಅಕ್ರಮ ಗಣಿಗೆ ಜೈ

ಗೃಹ ಕಚೇರಿ ಕೃಷ್ಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಅಕ್ರಮ ಗಣಿಗಾರಿಕೆಲ್ಲಿ ತೊಡಗಿರುವವರನ್ನು ಬೆತ್ತಲೆಗೊಳಿಸದಿದ್ದರೆ ನಾನು ಯಡಿಯೂರಪ್ಪನೇ ಅಲ್ಲ ಎಂದಿದ್ದಾರೆ. ಕೇಂದ್ರ ಸರಕಾರ ಕೈ ಬೆಚ್ಚಗೆ ಮಾಡುವವರಿಗೆ ಮಾತ್ರ ಅನುಮತಿ ನೀಡುತ್ತಿದೆ. ಆದರೆ, ಸರಕಾರಿ ಸ್ವಾಮ್ಯದ ಕುದುರೆಮುಖ, ವಿಎಸ್ ಐಎಲ್ ಮತ್ತು ಜಿಂದಾಲ್ ನಂತಹ ಸಂಸ್ಥೆಗಳಿಗೆ ಏಕೆ ಅನುಮತಿ ನೀಡುತ್ತಿಲ್ಲ. ಇವರು ಕೇಂದ್ರ ಸರಕಾರವನ್ನು ಕೈಯನ್ನು ಬೆಚ್ಚಗೆ ಮಾಡುವಂತ ಸ್ಥಿತಿಯಲ್ಲಿ ಇಲ್ಲದಿರುವುದರಿಂದ ಇವರಿಗೆ ಗುತ್ತಿಗೆ ದೊರೆಯುತ್ತಿಲ್ಲ ಎಂದು ಯಡಿಯೂರಪ್ಪ ಆರೋಪಿಸಿದರು.
ಕೆಲವು ಸ್ವದೇಶಿ ಕಂಪನಿಗಳ ಮೌಲ್ಯವರ್ಧಿತ ಅದಿರು ರಫ್ತುಗೆ ಮುಂದೆ ಬಂದಿದ್ದರೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕಾರವಾರ ಸಮೀಪದ ಬೇಲೇಕೇರಿ ಬಂದರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ಟನ್ ಕಬ್ಬಿಣದ ಅದಿರನ್ನು ಲೋಕಾಯುಕ್ತರು ಪತ್ತೆ ಹಚ್ಚಿದ್ದಾರೆ. ಇದುವರೆಗೂ ಒಟ್ಟು 58 ಜನರನ್ನು ಬಂಧಿಸಲಾಗಿದೆ. ಮುಂದೆ ಇನ್ನಷ್ಟು ಜನ ಬಂಧಿತರಾದರೆ ಇವರಿಗಾಗಿಯೇ ಪ್ರತ್ಯೇಕ ಜೈಲು ತೆರೆಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬೇಲೇಕೇರಿ ಬಂದರಿನ ಕರ್ಮಕಾಂಡ ಹೊರಬೀಳುತ್ತಿದ್ದಂತೆಯೇ ಮಾಜಿ ಸಚಿವರು, ಕೇಂದ್ರದ ಮಾಜಿ ಸಚಿವರು, ಪ್ರಭಾವಿ ರಾಜಕಾರಣಿಗಳು ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳುವ ಸಲುವಾಗಿ ನನ್ನ ಕೈಕಟ್ಟಿಹಾಕಲು ಯತ್ನಿಸುತ್ತಿದ್ದಾರೆ. ತಮ್ಮನ್ನು ಪರೋಕ್ಷವಾಗಿ ಹಾಗೂ ನೇರವಾಗಿ ಕೆಲವರು ಸಂಪರ್ಕಿಸುತ್ತಿದ್ದಾರೆಂದು ಅವರು ದೂರಿದರು. ಲೋಕಾಯುಕ್ತರು ತಮ್ಮ ಸತತ ಪರಿಶ್ರಮದಿಂದ ಸರಕಾರದ ಕಣ್ಣು ತೆರೆಸಿದ್ದಾರೆ. ಪ್ರತಿಪಕ್ಷಗಳು ಕೇವಲ ರೆಡ್ಡಿ ಸಹೋದರರನ್ನು ಮಾತ್ರ ಟೀಕಿಸುತ್ತದೆ. ನಾಡಿನ ಸಂಪತ್ತು ರಕ್ಷಿಸುವ ಇಚ್ಚೆ ಇದ್ದರೆ ಕೇಂದ್ರ ಸರಕಾರ ಕಬ್ಬಿಣದ ಅದಿರು ರಫ್ತು ನಿಷೇಧ ಮಾಡುವಂತೆ ಯಡಿಯೂರಪ್ಪ ಒತ್ತಾಯಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications