ಶರಣಾದ ನಕ್ಸಲಿಗೆ ಮಾಸಿಕ ರು.2,000 ಸಹಾಯಧನ

ಈವರೆಗಿನ ನಮ್ಮ ಅನುಭವದಲ್ಲಿ ಯುವಕರನ್ನು ಉಗ್ರಗಾಮಿ ಮಾರ್ಗ ಸೇರಲು ಹಾದಿ ತಪ್ಪಿಸಲಾಗುತ್ತಿದೆ. ಈ ರೀತಿ ದಾರಿ ತಪ್ಪಿ ಹಿಂಸಾತ್ಮಕ ಮಾರ್ಗಗಳಿಗೆ ಹೋಗದಂತೆ ಸದವಕಾಶ ನೀಡಲು ಸರ್ಕಾರವು ಶರಣಾಗತಿ ಮತ್ತು ಪುನರ್ವಸತಿ ಕಾರ್ಯನೀತಿಗೆ ಸರ್ಕಾರ ಆದೇಶ ಹೊರಡಿಸಿದೆ.
ಶರಣಾಗತರಾದವರು ವೃತ್ತಿಪರ ತರಬೇತಿ ಹೊಂದಲು ಅರ್ಹರಾಗಿದ್ದು ಅವರಿಗೆ ಒಂದು ವರ್ಷಕಾಲ ಮಾಸಿಕ ರೂ. 2000 ನಿಯತಕಾಲಿಕ ಸಹಾಯಧನ ನೀಡಲಾಗುವುದು. ಶರಣಾಗತರು ಅನುದಾನ ರೀತಿಯ ಸಾಲವಾಗಿ ರೂ.2,00,000ಗಳನ್ನು ಪಡೆಯಬಹುದು.
ಶರಣಾಗತರು ಆಯುಧಗಳು, ಸ್ಫೋಟಕ ವಸ್ತುಗಳು ಮತ್ತು ಸಂಪರ್ಕ ಸಾಧನಗಳನ್ನು ಒಪ್ಪಿಸಿದರೆ ರೂ. 500 ರಿಂದ 25,000 ವರೆಗೆ ನಗದು ಬಹುಮಾನ ನೀಡಲಾಗುವುದು. ಇತರೆ ಉಗ್ರಗಾಮಿಗಳನ್ನು ಹಿಡಿಯಲು ಶರಣಾಗರು ಮಾಹಿತಿ ನೀಡಿದರೆ, ಅವರಿಗೆ ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುವುದು.
ಶರಣಾಗತರಾದವರ ವಿರುದ್ದ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಲು ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಈ ಶರಣಾಗತಿಯ ಕಾರ್ಯನೀತಿಯ ಕರ್ನಾಟಕ ರಾಜ್ಯಕ್ಕೆ ಸೇರಿದ ವ್ಯಕ್ತಿಗಳಿಗೆ ಮಾತ್ರ ಅನ್ವಯವಾಗುತ್ತದೆ. ಈ ಕಾರ್ಯನೀತಿಯು ಮೇ 2011 ರವರೆಗೆ ಲಭ್ಯವಿರುತ್ತದೆಂದು ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರವರ ಕಛೇರಿ ಪ್ರಕಟಣೆ ತಿಳಿಸಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications