ತಿರುಪತಿ ತಿಮ್ಮಪ್ಪನ ಆಭರಣಗಳಿಗೆ ವಿಮೆ ರಕ್ಷೆ

ತಿರುಪತಿ ತಿಮ್ಮಪ್ಪನ ಬಳಿಯಿರುವ 52,000ಕೋ.ರೂ. ಮೌಲ್ಯದ ಚಿನ್ನಾಭರಣಗಳಿಗಾಗಿ ವಿಮಾ ರಕ್ಷಣೆಯನ್ನು ಪಡೆದುಕೊಳ್ಳಲು ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್ ನಿರ್ಧರಿಸಿದೆ . ಪ್ರತಿದಿನ ಏನಿಲ್ಲವೆಂದರೂ 70,000 ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಳ್ಳುತ್ತಿದ್ದು, ಪ್ರತಿ ತಿಂಗಳೂ ಸುಮಾರು ಎರಡು ಮಿಲಿಯ ಡಾಲರ್ ಕಾಣಿಕೆ
ಸಂಗ್ರಹವಾಗುತ್ತದೆ.
ಅಲ್ಲದೆ, ದರ್ಶನ ಟಿಕೆಟ್ಗಳು ಮತ್ತು ಪ್ರಸಾದದ ಮಾರಾಟ, ಹರಾಜುಗಳಂತಹ ಇತರ ಮೂಲಗಳಿಂದಲೂ ದೇವಸ್ಥಾನಕ್ಕೆ ಭರಪೂರ ಆದಾಯ ಹರಿದು ಬರುತ್ತಿದೆ. ದೇವಸ್ಥಾನದಲ್ಲಿ 20 ಟನ್ಗಳಷ್ಟು ಚಿನ್ನ ಮತ್ತು ವಜ್ರಾಭರಣಗಳಿವೆ ಎನ್ನಲಾಗಿದ್ದು, ಕೆಲವು 12 ನೇ ಶತಮಾನದಷ್ಟು ಹಳೆಯದಾಗಿವೆ.
ಕಳೆದ ವರ್ಷ ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿಯವರು ಶ್ರೀ ದೇವರಿಗೆ 42 ಕೋಟಿ ರೂ. ಮೌಲ್ಯದ ವಜ್ರ ಖಚಿತ ಕಿರೀಟವನ್ನು ಅರ್ಪಿಸಿದ್ದರು. ಆದರೂ, ತಿರುಪತಿ ಬಾಲಾಜಿಯ ಸಂಪತ್ತಿಗೆ ವಿಮೆ ಮಾಡಿಸುವುದು ಪ್ರಯಾಸದ ಕಾರ್ಯವಾಗಲಿದೆ. ಇದರಲ್ಲಿ ಅಡಗಿರುವ ಅಪಾಯ ಮತ್ತು ಆಭರಣಗಳ ಪ್ರಾಚೀನ ಲಕ್ಷಣಗಳನ್ನು ಪರಿಗಣಿಸಿದರೆ ಪ್ರೀಮಿಯಂ ಹಣ ಸಾಕಷ್ಟು ದೊಡ್ಡ ಮೊತ್ತವಾಗಬಹುದು ಎಂದು ವೃತ್ತಪತ್ರಿಕೆಯೊಂದು ವರದಿ ಮಾಡಿದೆ.
ಟ್ರಸ್ಟ್ನ ನಿರ್ಧಾರವು ಕಾರ್ಯಗತಗೊಂಡರೆ ತಿರುಪತಿ ತಿಮ್ಮಪ್ಪನ ವಿಮಾಪಾಲಿಸಿ 26 ಬಿಲಿಯನ್ ಡಾಲರ್ಗಳ ವಿಮೆಯನ್ನು ಹೊಂದಿರುವ ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ (ಒಎನ್ಜಿಸಿ)ವನ್ನು ಹಿಂದಿಕ್ಕಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications