ಮಂತ್ರಾಲಯ ಮಠದಲ್ಲಿ ಅವ್ಯವಹಾರ!

ಹಿಂದಿನ ಶ್ರೀಗಳಾದ ಸುಶಮೀಂದ್ರ ತೀರ್ಥರು ಪ್ರಜ್ಞಾಹೀನರಾಗಿದ್ದ ವೇಳೆ ಸುಯತೀಂದ್ರ ತೀರ್ಥರಿಗೆ ಯಾವುದೇ ಧಾರ್ಮಿಕ ವಿಧಿ ವಿಧಾನವಿಲ್ಲದೆ ಅಧಿಕಾರ ಹಸ್ತಾಂತರಿಸಿ ಸ್ವಾಮೀಜಿಗಳನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಶ್ರೀ ಮಠದ ಸಿಬ್ಬಂದಿ ಹಿತರಕ್ಷಣಾ ಸಮಿತಿಯ ಪದಾದಿಕಾರಿಗಳು ಆರೋಪಿಸಿದ್ದಾರೆ.
ಆನಂದ್ ರಾವ್ ನಿವೃತ್ತರಾಗಿ ವರ್ಷಗಳೇ ಕಳೆದಿದ್ದರೂ ಈಗಲೂ ಮಠದ ಆಂತರಿಕ ವಿಚಾರಗಳಿಗೆ ಕೈಹಾಕಿ ಅನೇಕ ಅನಾಚಾರಗಳಿಗೆ ಕಾರಣರಾಗಿದ್ದಾರೆ. ಈಗಿನ ಸ್ವಾಮೀಜಿಗಳಾದ ಸುಯತೀಂದ್ರತೀರ್ಥರು ಮತ್ತು ಅವರ ಪುತ್ರ ಸುಯಮೀಂದ್ರ ಆಚಾರ್ಯ ಆನಂದ್ ರಾವ್ ಅವರಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆಂದು ಗಂಭೀರವಾಗಿ ಆರೋಪಿಸಲಾಗಿದೆ.
ಇತ್ತೀಚಿಗೆ ಮಠದ ಆಸ್ತಿಯ ಹೋಟೆಲ್ ಒಂದನ್ನು ಅಕ್ರಮವಾಗಿ ಬಾಡಿಗೆಗೆ ನೀಡಿ ಬಾಡಿಗೆದಾರನ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇದರಿಂದ ಬಾಡಿಗೆದಾರ ಆತ್ಮಹತ್ಯೆಗೆ ಯತ್ನಿಸಿ ತನ್ನ ಎರಡೂ ಕಣ್ಣುಗಳನ್ನು ಕಳೆದುಕೊಂಡಿದ್ದಾನೆ ಎಂದು ಸಮಿತಿ ಹೇಳಿಕೆ ನೀಡಿದೆ.
ಇಷ್ಟೇ ಅಲ್ಲದೆ ಆನಂದ್ ರಾವ್ ಹುಬ್ಬಳ್ಳಿಯ ಭಕ್ತವೃಂದಕ್ಕೆ ಅವಮಾನ ಮಾಡಿದ್ದಾರೆ. ಹುಬ್ಬಳ್ಳಿಯ ಶಾಖಾ ಮಠದಲ್ಲಿ ಅನಾಚಾರವೆಸಗಿದ್ದಾರೆ. ಸುಜಯೀಂದ್ರ ತೀರ್ಥರ ಕುಟುಂಬದವರಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ. ಸೆಪ್ಟಂಬರ್ 9ರ ಬೆಳಿಗ್ಗೆ 7 ಗಂಟೆಯಿಂದ ಮಠದ ಮಹಾದ್ವಾರದ ಮುಂದೆ ಧರಣಿ ನಡೆಸಲಾಗುವುದು.
ವಿವಿಧ ಕಡೆಯಿಂದ ಸುಮಾರು 300 ಕ್ಕೂ ಹೆಚ್ಚು ಭಕ್ತರು ಧರಣಿಯಲ್ಲಿ ಭಾಗವಹಿಸಲಿದ್ದಾರೆ. ನಮ್ಮ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಆಂಧ್ರಪ್ರದೇಶದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಸಮಿತಿಯ ಅಧ್ಯಕ್ಷರು ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications