ಮಂತ್ರಾಲಯ ಮಠದಲ್ಲಿ ಅವ್ಯವಹಾರ!

ಹಿಂದಿನ ಶ್ರೀಗಳಾದ ಸುಶಮೀಂದ್ರ ತೀರ್ಥರು ಪ್ರಜ್ಞಾಹೀನರಾಗಿದ್ದ ವೇಳೆ ಸುಯತೀಂದ್ರ ತೀರ್ಥರಿಗೆ ಯಾವುದೇ ಧಾರ್ಮಿಕ ವಿಧಿ ವಿಧಾನವಿಲ್ಲದೆ ಅಧಿಕಾರ ಹಸ್ತಾಂತರಿಸಿ ಸ್ವಾಮೀಜಿಗಳನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಶ್ರೀ ಮಠದ ಸಿಬ್ಬಂದಿ ಹಿತರಕ್ಷಣಾ ಸಮಿತಿಯ ಪದಾದಿಕಾರಿಗಳು ಆರೋಪಿಸಿದ್ದಾರೆ.
ಆನಂದ್ ರಾವ್ ನಿವೃತ್ತರಾಗಿ ವರ್ಷಗಳೇ ಕಳೆದಿದ್ದರೂ ಈಗಲೂ ಮಠದ ಆಂತರಿಕ ವಿಚಾರಗಳಿಗೆ ಕೈಹಾಕಿ ಅನೇಕ ಅನಾಚಾರಗಳಿಗೆ ಕಾರಣರಾಗಿದ್ದಾರೆ. ಈಗಿನ ಸ್ವಾಮೀಜಿಗಳಾದ ಸುಯತೀಂದ್ರತೀರ್ಥರು ಮತ್ತು ಅವರ ಪುತ್ರ ಸುಯಮೀಂದ್ರ ಆಚಾರ್ಯ ಆನಂದ್ ರಾವ್ ಅವರಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆಂದು ಗಂಭೀರವಾಗಿ ಆರೋಪಿಸಲಾಗಿದೆ.
ಇತ್ತೀಚಿಗೆ ಮಠದ ಆಸ್ತಿಯ ಹೋಟೆಲ್ ಒಂದನ್ನು ಅಕ್ರಮವಾಗಿ ಬಾಡಿಗೆಗೆ ನೀಡಿ ಬಾಡಿಗೆದಾರನ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇದರಿಂದ ಬಾಡಿಗೆದಾರ ಆತ್ಮಹತ್ಯೆಗೆ ಯತ್ನಿಸಿ ತನ್ನ ಎರಡೂ ಕಣ್ಣುಗಳನ್ನು ಕಳೆದುಕೊಂಡಿದ್ದಾನೆ ಎಂದು ಸಮಿತಿ ಹೇಳಿಕೆ ನೀಡಿದೆ.
ಇಷ್ಟೇ ಅಲ್ಲದೆ ಆನಂದ್ ರಾವ್ ಹುಬ್ಬಳ್ಳಿಯ ಭಕ್ತವೃಂದಕ್ಕೆ ಅವಮಾನ ಮಾಡಿದ್ದಾರೆ. ಹುಬ್ಬಳ್ಳಿಯ ಶಾಖಾ ಮಠದಲ್ಲಿ ಅನಾಚಾರವೆಸಗಿದ್ದಾರೆ. ಸುಜಯೀಂದ್ರ ತೀರ್ಥರ ಕುಟುಂಬದವರಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ. ಸೆಪ್ಟಂಬರ್ 9ರ ಬೆಳಿಗ್ಗೆ 7 ಗಂಟೆಯಿಂದ ಮಠದ ಮಹಾದ್ವಾರದ ಮುಂದೆ ಧರಣಿ ನಡೆಸಲಾಗುವುದು.
ವಿವಿಧ ಕಡೆಯಿಂದ ಸುಮಾರು 300 ಕ್ಕೂ ಹೆಚ್ಚು ಭಕ್ತರು ಧರಣಿಯಲ್ಲಿ ಭಾಗವಹಿಸಲಿದ್ದಾರೆ. ನಮ್ಮ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಆಂಧ್ರಪ್ರದೇಶದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಸಮಿತಿಯ ಅಧ್ಯಕ್ಷರು ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications