ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಮಚಂದ್ರಗೌಡರಿಗೆ ಹೈಕೋರ್ಟ್ ಛೀಮಾರಿ
ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ಏಕಾಏಕಿ ಸರಕಾರ ಬೋಧಕೇತರ ಸಿಬ್ಬಂದಿ ನೇಮಕಾತಿಯನ್ನು ಅಸಿಂಧುಗೊಳಿಸಿರುವುದನ್ನು ಪ್ರಶ್ನಿಸಿ ಹಾಸನ ಹಾಗೂ ಮೈಸೂರು ವೈದ್ಯಕೀಯ ಕಾಲೇಜುಗಳ ಬೋಧಕೇತರ ಸಿಬ್ಬಂದಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾ.ರಾಮಮೋಹನರೆಡ್ಡಿ ಅವರು ಅಶ್ಚರ್ಯ ವ್ಯಕ್ತಪಡಿಸಿದರು.
ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಸಚಿವರು ರಾಜ್ಯ ಸಂಪುಟದಲ್ಲೂ ಇದ್ದಾರೆ. ಅಕ್ರಮ ನಡೆದಿದೆ ಎಂದು ಒಪ್ಪಿ ಸರಕಾರವೇ ನೇಮಕಾತಿಯನ್ನು ಅಸಿಂಧುಗೊಳಿಸಿದೆ. ಹಾಗಾದರೆ ಸಚಿವರು ಇದನ್ನು ಪರೋಕ್ಷವಾಗಿ ಒಪ್ಪಿಕೊಂಡಂತಲ್ಲವೇ? ಇಲಾಖೆಯ ಜವಾಬ್ದಾರಿ ಹೊತ್ತಿರುವ ಸಚಿವರು ಇನ್ನೂ ಸಚಿವರಾಗಿ ಉಳಿಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಇದೇ ಗುರುವಾರದೊಳಗೆ(ಸೆ.9) ಪ್ರಮಾಣಪತ್ರ ಸಲ್ಲಿಸುವ ಮೂಲಕ ಈ ಬಗ್ಗೆ ಉತ್ತರಿಸಬೇಕು ಎಂದು ಸರಕಾರಕ್ಕೆ ಸೂಚನೆ ನೀಡಿದ್ದಾರೆ.
Comments
ಹೈಕೋರ್ಟ್ ರಾಮಚಂದ್ರಗೌಡ ಹಾಸನ ಮೈಸೂರು ನೇಮಕಾತಿ ಪ್ರಮಾಣಪತ್ರ high court ramachandra gowda hassan mysore affidavit
Story first published: Tuesday, September 7, 2010, 11:46 [IST]