ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಸಿಎಂ ಕ್ಷಮೆಯಾಚಿಸಲಿ :ಭಾರಧ್ವಾಜ್

By Mahesh
|
Google Oneindia Kannada News

HR Bhardwaj
ಬೆಂಗಳೂರು, ಸೆ.9 : ಅಕ್ರಮ ಗಣಿಗಾರಿಕೆ ವಿಚಾರವಾಗಿ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಮಧ್ಯೆ ಪತ್ರಗಳ ಸಮರ ಆರಂಭಗೊಂಡಿದ್ದು, ಸಿಎಂ ಕ್ಷಮೆಯಾಚನೆ ಮಾಡಲಿ ಎಂದು ರಾಜ್ಯಪಾಲರು ಆಶಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಹೆಸರು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ತಮ್ಮ ಪಾತ್ರವಿದೆ ಎಂಬ ಯಡಿಯೂರಪ್ಪ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯಪಾಲರು ಅನಗತ್ಯವಾಗಿ ತಮ್ಮ ಹೆಸರು ಎಳೆದು ತಂದಿರುವುದು ಸರಿಯಲ್ಲ, ಇದಕ್ಕಾಗಿ ಯಡಿಯೂರಪ್ಪ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಆದರೆ, ಮುಖ್ಯಮಂತ್ರಿಯವರು ಈ ಕುರಿತು ಸ್ಪಷ್ಟನೆ ನೀಡಿ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ರಾಜ್ಯಪಾಲರ ಬಗ್ಗೆ ನಾನು ಯಾವುದೇ ಆರೋಪ ಮಾಡಿಲ್ಲ. ಮಾಧ್ಯಮಗಳ ವರದಿಯಿಂದ ಅಚಾತುರ್ಯವಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X