ಬುದ್ಧಿವಂತ ಕ್ರಿಮಿನಲ್ ಎಕೆ ಸಿಂಗ್ ಶೂಟೌಟ್

ಪೀಣ್ಯದ ಪಟೇಲಪ್ಪ ನಗರದ ನಿವಾಸಿಯಾಗಿದ್ದ ಎಕೆ ಸಿಂಗ್ ಉತ್ತರ ಪ್ರದೇಶ ಮೂಲದವನು. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಎಂಬತ್ತು ಅಡಿರಸ್ತೆಯಲ್ಲಿನ ಮೆಡಿಕಲ್ ಶಾಪ್ ಬಳಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದ.ಆತನನ್ನು ಬಂಧಿಸಿದ ಪೊಲೀಸರು ಠಾಣೆಗೆ ಕರೆದೊಯ್ಯುತ್ತಿದ್ದ ವೇಳೆ ಇಲ್ಲಿನ ಕೆಜಿ ಹಳ್ಳಿ ಸಮೀಪ ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ.
ಗುರುವಾರ ಮಧ್ಯಾಹ್ನ ಇಲ್ಲಿನ ಹೆಣ್ಣೂರು-ಬಾಗಲೂರು ರಸ್ತೆಯಲ್ಲಿನ ಹೂವಿನನಾಯಕನ ಹಳ್ಳಿ ಕ್ರಾಸ್ ಸಮೀಪದಲ್ಲಿ ಅಡಗಿಕೊಂಡಿದ್ದ. ಈ ಸಂದರ್ಭದಲ್ಲಿ ಸಿಂಗ್ನನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ಪಿಸ್ತೂಲ್ನಿಂದ ಗುಂಡು ಹಾರಿಸಿದ್ದಾನೆ.
ಈ ವೇಳೆ ಪ್ರೇಜರ್ಟೌನ್ ಠಾಣಾ ಇನ್ಸ್ಪೆಕ್ಟರ್ ಗಿರೀಶ್ ರಕ್ಷಣೆಗಾಗಿ ಗುಂಡು ಹಾರಿಸಿದ್ದು, ಆರೋಪಿ ಸಿಂಗ್ ತಲೆಗೆ ಗುಂಡು ತಗುಲಿದೆ. ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಿಂಗ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಸಿಂಗ್ ನಗರದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ರೌಡಿ ಪಟ್ಟಿ ಯಲ್ಲಿರುವ ಆಸಾಮಿಯಾಗಿದ್ದು, ಕಳವು, ದರೋಡೆ, ಕೊಲೆಯತ್ನ ಸೇರಿದಂತೆ ಈತನ ವಿರುದ್ಧ ಒಟ್ಟು 29ಕ್ಕೂ ಹೆಚ್ಚು ಮೊಕದ್ದಮೆಗಳು ದಾಖಲಾಗಿವೆ .
ಬುದ್ಧಿವಂತ ರೌಡಿ: ಎಸ್ ಎಸ್ ಎಲ್ ಸಿ ಯಲ್ಲಿ ಶೇ. 87 ಅಂಕ, ಪಿಯುಸಿಯಲ್ಲಿ ಶೇ. 73 ಅಂಕ, ಇಂದಿರಾಗಾಂಧಿ ಮುಕ್ತ ವಿಶ್ವವಿದ್ಯಾಲಯದ ಮೂಲಕ ಎಂಬಿಎ ಮಾಡುತ್ತಿದ್ದಾಗ ಭೂಗತ ಲೋಕದ ನಂಟು ಆರಂಭವಾಯಿತು. ಬಿಹಾರದಿಂದ ಅಕ್ರಮವಾಗಿ ಶಸ್ತ್ರಾಸ್ತ್ರ ಮಾರಾಟ ಮಾಡತೊಡಗಿದ. 2005 ರಲ್ಲಿ ಬಂಧಿತನಾದರೂ ಜಾಮೀನು ಪಡೆದು ಹೊರಬಿದ್ದಿದ್ದ. ಇತ್ತೀಚೆಗೆ ಈತನ ಗ್ಯಾಂಗ್ ನ ಪ್ರಮುಖರನ್ನು ಮುಂಬೈ ಪೊಲೀಸರು ಬಂಧಿಸಿ 34 ಕ್ಕೂ ಅಧಿಕ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications